BREAKING NEWS

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್

ಕಲಬುರಗಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆರಗ ಜ್ಞಾನೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 504 (ಶಾಂತಿ ಭಂಗ ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣವನ್ನು ನಾಳೆ ಘಟನೆ ಸಂಭವಿಸಿದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಆಗಸ್ಟ್ 1ರಂದು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕ ಆರಗ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಕಸ್ತೂರಿರಂಗನ್ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಗೆ ಖರ್ಗೆಯವರೂ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಗುರಿಯಾಗಿಸಿ ಆರಗ ಜ್ಞಾನೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದರು.

ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಆ ಭಾಗದ ಜನರಿಗೆ ಮರ, ಗಿಡಗಳ ಬಗ್ಗೆ ಏನೂ ಗೊತ್ತಿಲ್ಲ. ಅವರು ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನರ ಜೀವನದ ಮೇಲೆ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗಿರುವುದು ನಮ್ಮ ದುರದೃಷ್ಟ. ಬಿಸಿಲಿನ ತಾಪಕ್ಕೆ ಅಲ್ಲಿನ ಜನ ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ಟೀಕಿಸಿದ್ದರು.

ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಆರಗ ಜ್ಞಾನೇಂದ್ರ ವಿರುದ್ಧ ಪ್ರತಿಭಟನೆ ನಡೆಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಆದರೆ, ಈ ವಿಷಯ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಆರಗ ಜ್ಞಾನೇಂದ್ರ ಅವರು, ‘ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ, ಅವರನ್ನು ಟೀಕಿಸುವಷ್ಟು ದೊಡ್ಡವನೆಂದು ನನಗನಿಸುವುದಿಲ್ಲ. ಅವರ ಹಿರಿತನ, ಅನುಭವಕ್ಕೆ ಗೌರವ ಕೊಟ್ಟು ಮಾತನಾಡುತ್ತೇನೆ. ಖಂಡ್ರೆ, ಮಲ್ಲಿಕಾರ್ಜುನ ಖರ್ಗೆ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

1 hour ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

3 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

12 hours ago