BREAKING NEWS

ಅಶ್ಲೀಲ ವಿಡಿಯೋ ಪ್ರಕರಣ: ತಿಂಗಳ ಬಳಿಕ ಪ್ರಜ್ವಲ್‌ ಪ್ರತ್ಯಕ್ಷ

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ.

ವಿದೇಶದಿಂದ ಇಂದು(ಮೇ.೨೭) ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ.31 ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಇಷ್ಟು ದಿನ ಯಾರ ಸಂಪರ್ಕಕ್ಕೂ ಸಿಗದ ಕಾರಣ ಈ ಪ್ರಕರಣದಿಂದ ನನ್ನ ಕುಟುಂಬ ಮುಜುಗರಕ್ಕೊಳಗಾಗಿದ್ದು, ತಾತ, ತಂದೆ, ತಾಯಿ, ಕುಮಾರಣ್ಣ, ಜೆಡಿಎಸ್‌ ಕಾರ್ಯಕರ್ತರು ಹಾಗೂ ನಾಡಿನ ಜನರ ಬಳಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ವಿದೇಶಕ್ಕೆ ತೆರಳಿರುವ ಬಗ್ಗೆ ತಿಳಿಸಿದ ಅವರು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ತಿಳಿಸಿದ್ದಾರೆ.

ಪ್ರಜ್ವಲ್‌ ವಿಡಿಯೋದಲ್ಲಿ ಹೇಳಿರುವುದೇನು..?
ಮೊದಲನೆಯದಾಗಿ ತಾತಾ, ತಂದೆ, ತಾಯಿ ಕುಮಾರಣ್ಣ ಹಾಗೂ ಜೆಡಿಎಸ್‌ ಕಾರ್ಯಕರ್ತರಲ್ಲಿ ಕ್ಷಮೆ ಕೇಳುತ್ತಿದ್ದೇನೆ. ಏಪ್ರಿಲ್‌ ೨೬ ರಂದು ಚುನಾವಣೆ ಮುಗಿದ ಮೇಲೆ ನಾನು ವಿದೇಶಕ್ಕೆ ಬಂದೆ. ಅವತ್ತು ನನ್ನ ಮೇಲೆ ಯಾವುದೇ ದೂರು ದಾಖಲಾಗಿರಲಿಲ್ಲ. ವಿದೇಶಕ್ಕೆ ಹೋಗುವ ಪ್ಲಾನ್‌ ಮುಂಚೆಯೇ ಇತ್ತು. ಅದರಂತೆ ನಾನು ಅವತ್ತು ವಿದೇಶಕ್ಕೆ ಹೋಗಿದ್ದೆ. ವಿದೇಶಕ್ಕೆ ಹೋದ ಮೂರು ನಾಲ್ಕು ದಿನಗಳ ಬಳೀಕ ಯುಟ್ಯೂಬ್‌ ಚಾನಲ್ ನೋಡಿದ ಸಂಧರ್ಭದಲ್ಲಿ ನನ್ನ ಮೇಲೆ ದೂರು ದಾಖಲಾಗಿರುವುದು ತಿಳಿಯಿತು. ಅಷ್ಟೋತ್ತಿಗಾಗಲೇ ಎಸ್‌ಐಟಿ ರಚನೆಯಾಗಿತ್ತು. ಹಾಗಾಗಿ ಏಳು ದಿನಗಳ ಒಳಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ ಎಂದಿದ್ದೆ.

ಬಳಿಕ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ‌ ಹಾಗೂ ಕಾಂಗ್ರೆಸ್‌ ನಾಯಕರು ನನ್ನ ವಿರುದ್ಧ ಪಿತೂರಿ ಶುರು ಮಾಡಿದ್ರು, ಬಹಿರಂಗ ವೇದಿಕೆಗಳಲ್ಲಿ ನನ್ನ ವಿರುದ್ಧ ಮಾತನಾಡುತ್ತಿದ್ದರು. ಇದರಿಂದ ನಾನು ಡಿಪ್ರೇಶನ್‌ಗೆ ಹೋದೆ. ಇದಾದ ಬಳಿಕ ಹಾಸನದಲ್ಲೂ ಕೂಡ ಕೆಲ ಶಕ್ತಿಗಳು ಒಟ್ಟಿಗೆ ಸೇರಿಕೊಂಡು ನನ್ನ ಮೇಲೆ ರಾಜಕೀಯ ಪಿತೂರಿ ಮಾಡುವ ಕೆಲಸ ಮಾಡಿದ್ರು, ರಾಜಕೀಯವಾಗಿ ಬೆಳೆಯುತ್ತಿರುವ ನನ್ನನ್ನು ಕುಗ್ಗಿಸುವುದಕ್ಕಾಗಿ ಈ ಪ್ರಕರಣದಲ್ಲಿ ಎಲ್ಲಾರೂ ಭಾಗಿಯಾಗಿ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ಪ್ರಕರಣ ಈ ಹಂತಕ್ಕೆ ತಲುಪಿದ್ದರು ನಾನು ವಿದೇಶದಲ್ಲೇ ಉಳಿದಿದ್ದೇನೆ  ಎಂದು ಯಾರು ತಪ್ಪು ತಿಳಿಯುವುದು ಬೇಡಿ. ಮೇ .31 ರಂದು ಎಸ್‌ಐಟಿ ಮುಂದೆ ಬಂದು ಹಾಜರಾಗ್ತೆನೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ನ್ಯಾಯಲಯದ ಮೇಲೆ ನನಗೆ ನಂಬಿಕೆ ಇದೆ. ಖಂಡಿತವಾಗಿಯೂ ಈ ಸುಳ್ಳು ಪ್ರಕರಣದಿಂದ ಹೊರಬರುತ್ತೇನೆ ಎನ್ನುವ ನಂಬಿಕೆ ಇದೆ.

ನ್ಯಾಯಲದ ಮೇಲೆ ನನಗೆ ನಂಬಿಕೆ. ದೇವರು, ಕುಟುಂಬ, ಜನರ ಆರ್ಶೀವಾದ ನನ್ನ ಮೇಲಿರಲಿ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದಲೇ ನ್ಯಾಯ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

24 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

35 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

46 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

58 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

1 hour ago