BREAKING NEWS

ಏಕದಿನ ವಿಶ್ವಕಪ್‌: ಸಚಿನ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು.

ಭಾನುವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿ ಸಹಿತ 100 ರನ್ ಪೇರಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ ಅತೀ ಹೆಚ್ಚು ಶತಕದ ದಾಖಲೆ ಸರಿಗಟ್ಟಿದರು.

ನ.5 ತಮ್ಮ 35 ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ ಟೂರ್ನಿಯುದ್ದಕ್ಕೂ ಶತಕದ ಅಂಚಿನಲ್ಲಿ ಎಡವಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ ಈ ಪಂದ್ಯದಲ್ಲಿ ರಕ್ಷಣಾತ್ಮಕ ಆಟದ ಮೂಲಕ ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಮನಸ್ಸಿಲ್ಲಿ ಅವಿಸ್ಮರಣೀಯಗೊಳಿಸಿದರು. ತಂಡದ ರನ್‌ ಗಳಿಕೆ ನಿಧಾನವಾದಾಗ ಒಂದೇ ಒಂದು ಸಿಕ್ಸರ್‌ ಬಾರಿಸದ ಕೊಹ್ಲಿ ಜವಾಬ್ದಾರಿಯುತ ಆಟವಾಡಿದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತದ ಕ್ರಿಕೆಟ್ ದೇವರು ಎಂದು ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್, ಒಟ್ಟು 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಸರಿಗಟ್ಟಿದ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ 288 ಪಂದ್ಯಗಳಲ್ಲಿ 49 ಏಕದಿನ ಶತಕ ಬಾರಿಸಿ ತಮ್ಮ, ಒಟ್ಟಾರೆ ಅಂತರಾಷ್ಟ್ರೀಯ ಶತಕ ವನ್ನು 79 ಕ್ಕೆ ಏರಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ತಮ್ಮ ಎರಡನೇ ಶತಕ ದಾಖಲಿಸಿದ ಕೊಹ್ಲಿ 8 ಪಂದ್ಯಗಳಿಂದ 542 ರನ್ ಬಾರಿಸಿ ವಿಶ್ವಕಪ್ 2023 ಅಧಿಕ ರನ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

1 hour ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

2 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

2 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

2 hours ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

2 hours ago