BREAKING NEWS

ಏಕದಿನ ವಿಶ್ವಕಪ್‌: ಸಚಿನ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು.

ಭಾನುವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿ ಸಹಿತ 100 ರನ್ ಪೇರಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ ಅತೀ ಹೆಚ್ಚು ಶತಕದ ದಾಖಲೆ ಸರಿಗಟ್ಟಿದರು.

ನ.5 ತಮ್ಮ 35 ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ ಟೂರ್ನಿಯುದ್ದಕ್ಕೂ ಶತಕದ ಅಂಚಿನಲ್ಲಿ ಎಡವಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ ಈ ಪಂದ್ಯದಲ್ಲಿ ರಕ್ಷಣಾತ್ಮಕ ಆಟದ ಮೂಲಕ ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಮನಸ್ಸಿಲ್ಲಿ ಅವಿಸ್ಮರಣೀಯಗೊಳಿಸಿದರು. ತಂಡದ ರನ್‌ ಗಳಿಕೆ ನಿಧಾನವಾದಾಗ ಒಂದೇ ಒಂದು ಸಿಕ್ಸರ್‌ ಬಾರಿಸದ ಕೊಹ್ಲಿ ಜವಾಬ್ದಾರಿಯುತ ಆಟವಾಡಿದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತದ ಕ್ರಿಕೆಟ್ ದೇವರು ಎಂದು ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್, ಒಟ್ಟು 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಸರಿಗಟ್ಟಿದ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ 288 ಪಂದ್ಯಗಳಲ್ಲಿ 49 ಏಕದಿನ ಶತಕ ಬಾರಿಸಿ ತಮ್ಮ, ಒಟ್ಟಾರೆ ಅಂತರಾಷ್ಟ್ರೀಯ ಶತಕ ವನ್ನು 79 ಕ್ಕೆ ಏರಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ತಮ್ಮ ಎರಡನೇ ಶತಕ ದಾಖಲಿಸಿದ ಕೊಹ್ಲಿ 8 ಪಂದ್ಯಗಳಿಂದ 542 ರನ್ ಬಾರಿಸಿ ವಿಶ್ವಕಪ್ 2023 ಅಧಿಕ ರನ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

6 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago