BREAKING NEWS

ಏಕದಿನ ವಿಶ್ವಕಪ್‌: ಸಚಿನ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು.

ಭಾನುವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿ ಸಹಿತ 100 ರನ್ ಪೇರಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ ಅತೀ ಹೆಚ್ಚು ಶತಕದ ದಾಖಲೆ ಸರಿಗಟ್ಟಿದರು.

ನ.5 ತಮ್ಮ 35 ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ ಟೂರ್ನಿಯುದ್ದಕ್ಕೂ ಶತಕದ ಅಂಚಿನಲ್ಲಿ ಎಡವಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ ಈ ಪಂದ್ಯದಲ್ಲಿ ರಕ್ಷಣಾತ್ಮಕ ಆಟದ ಮೂಲಕ ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಮನಸ್ಸಿಲ್ಲಿ ಅವಿಸ್ಮರಣೀಯಗೊಳಿಸಿದರು. ತಂಡದ ರನ್‌ ಗಳಿಕೆ ನಿಧಾನವಾದಾಗ ಒಂದೇ ಒಂದು ಸಿಕ್ಸರ್‌ ಬಾರಿಸದ ಕೊಹ್ಲಿ ಜವಾಬ್ದಾರಿಯುತ ಆಟವಾಡಿದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತದ ಕ್ರಿಕೆಟ್ ದೇವರು ಎಂದು ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್, ಒಟ್ಟು 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಸರಿಗಟ್ಟಿದ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ 288 ಪಂದ್ಯಗಳಲ್ಲಿ 49 ಏಕದಿನ ಶತಕ ಬಾರಿಸಿ ತಮ್ಮ, ಒಟ್ಟಾರೆ ಅಂತರಾಷ್ಟ್ರೀಯ ಶತಕ ವನ್ನು 79 ಕ್ಕೆ ಏರಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ತಮ್ಮ ಎರಡನೇ ಶತಕ ದಾಖಲಿಸಿದ ಕೊಹ್ಲಿ 8 ಪಂದ್ಯಗಳಿಂದ 542 ರನ್ ಬಾರಿಸಿ ವಿಶ್ವಕಪ್ 2023 ಅಧಿಕ ರನ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago