BREAKING NEWS

ಏಕದಿನ ವಿಶ್ವಕಪ್‌: ಸಚಿನ್ ದಾಖಲೆ ಸರಿಗಟ್ಟಿ ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು.

ಭಾನುವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿ ಸಹಿತ 100 ರನ್ ಪೇರಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ 49 ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ ಅತೀ ಹೆಚ್ಚು ಶತಕದ ದಾಖಲೆ ಸರಿಗಟ್ಟಿದರು.

ನ.5 ತಮ್ಮ 35 ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೊಹ್ಲಿ ಟೂರ್ನಿಯುದ್ದಕ್ಕೂ ಶತಕದ ಅಂಚಿನಲ್ಲಿ ಎಡವಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದ್ದರು. ಆದರೆ ಈ ಪಂದ್ಯದಲ್ಲಿ ರಕ್ಷಣಾತ್ಮಕ ಆಟದ ಮೂಲಕ ವಿರಾಟ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಮನಸ್ಸಿಲ್ಲಿ ಅವಿಸ್ಮರಣೀಯಗೊಳಿಸಿದರು. ತಂಡದ ರನ್‌ ಗಳಿಕೆ ನಿಧಾನವಾದಾಗ ಒಂದೇ ಒಂದು ಸಿಕ್ಸರ್‌ ಬಾರಿಸದ ಕೊಹ್ಲಿ ಜವಾಬ್ದಾರಿಯುತ ಆಟವಾಡಿದರು.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಭಾರತದ ಕ್ರಿಕೆಟ್ ದೇವರು ಎಂದು ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್, ಒಟ್ಟು 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಸರಿಗಟ್ಟಿದ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ 288 ಪಂದ್ಯಗಳಲ್ಲಿ 49 ಏಕದಿನ ಶತಕ ಬಾರಿಸಿ ತಮ್ಮ, ಒಟ್ಟಾರೆ ಅಂತರಾಷ್ಟ್ರೀಯ ಶತಕ ವನ್ನು 79 ಕ್ಕೆ ಏರಿಸಿದ್ದಾರೆ.

2023ರ ಏಕದಿನ ವಿಶ್ವಕಪ್ ತಮ್ಮ ಎರಡನೇ ಶತಕ ದಾಖಲಿಸಿದ ಕೊಹ್ಲಿ 8 ಪಂದ್ಯಗಳಿಂದ 542 ರನ್ ಬಾರಿಸಿ ವಿಶ್ವಕಪ್ 2023 ಅಧಿಕ ರನ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago