BREAKING NEWS

ಒಡಿಶಾ ರೈಲು ದುರಂತ: ಸಿಬಿಐನಿಂದ 3 ‘ರೈಲ್ವೆ ಅಧಿಕಾರಿಗಳ’ ಬಂಧನ

ನವದೆಹಲಿ: 292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದ್ದು, ಹಿರಿಯ ಸೆಕ್ಷನ್ ಎಂಜಿನಿಯರ್ ಅರುಣ್ ಕುಮಾರ್ ಮಹಾಂತ, ಮೊಹಮ್ಮದ್ ಅಮೀರ್ ಖಾನ್, ಸೆಕ್ಷನ್ ಎಂಜಿನಿಯರ್ ಮತ್ತು ತಂತ್ರಜ್ಞ ಪಪ್ಪು ಕುಮಾರ್’ನನ್ನ ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ.

ಈ ಹಿಂದೆ ಈ ಭೀಕರ ಅಪಘಾತದ ಕುರಿತು ತನಿಖಾ ವರದಿ ತಯಾರಿಸಿದ್ದ ಅಧಿಕಾರಿಗಳು ದುರಂತದಲ್ಲಿ ಸಿಬ್ಬಂದಿ ಲೋಪದೋಷವೇ ದುರಂತಕ್ಕೆ ಕಾರಣ ಎಂದು ಉಲ್ಲೇಖಿಸಿದ್ದರು. ಈ ವರದಿ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ವರದಿ ಬಗ್ಗೆ ಅಧಿಕಾರಿಗಳು ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ. ಆದರೆ ಇದೀಗ ಮೂವರು ಅಧಿಕಾರಿಗಳನ್ನು ಬಂಧಿಸುವ ಮೂಲಕ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಮತ್ತಷ್ಟು ಇಂಬು ದೊರೆತಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ತಪ್ಪಿತಸ್ಥ ನರಹತ್ಯೆಯ ಪ್ರಕರಣವನ್ನ ದಾಖಲಿಸಲಾಗಿದೆ. ಶಿಕ್ಷೆಯು ಅಪರಾಧದ ಗುರುತ್ವಾಕರ್ಷಣೆಗೆ ಅನುಗುಣವಾಗಿ ಜೀವಾವಧಿ ಶಿಕ್ಷೆ ಮತ್ತು ದಂಡ ಅಥವಾ ಕಠಿಣ ಸೆರೆವಾಸವನ್ನ ಒಳಗೊಂಡಿರುತ್ತದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಜೂನ್ 2 ರಂದು ಒಡಿಶಾದ ಬಾಲೇಶ್ವರ್ ಜಿಲ್ಲೆಯ ಬಹನಾಗ್ ರೈಲು ನಿಲ್ದಾಣದ ಬಳಿ ಕೊಲ್ಕತ್ತದಿಂದ ಚೆನ್ನೈಗೆ ಹೊರಟಿದ್ದ ಕೊರೋಮಂಡಲ್ ಎಕ್ಸ್‌ಪ್ರೆಸ್ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಇದೇ ಮಾರ್ಗದ ಪಕ್ಕದ ಟ್ರ್ಯಾಕ್‌ನಲ್ಲಿ ಸಂಚರಿಸುತ್ತಿದ್ದ ಬೆಂಗಳೂರು– ಹೌರಾ ಎಕ್ಸ್‌ಪ್ರೆಸ್ ರೈಲಿಗೂ ಡಿಕ್ಕಿಯಾಗಿತ್ತು. ಘಟನೆಯಲ್ಲಿ 291 ಪ್ರಯಾಣಿಕರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಘಟನೆಯಾದ ಮೂರು ದಿನಗಳ ನಂತರ ಈ ಪ್ರಕರಣದ ತನಿಖೆಯನ್ನು ರೈಲ್ವೆ ಮಂಡಳಿ ಸಿಬಿಐಗೆ ವಹಿಸಿತ್ತು. ಮಾನವ ಲೋಪವೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸಿಬಿಐನ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

12 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

12 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

12 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

12 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

12 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

12 hours ago