BREAKING NEWS

ಒಡಿಶಾ ರೈಲು ದುರಂತ : ದುರಂತದ ಸ್ಥಳದಲ್ಲಿ ಸಿಲುಕಿರುವ 30ಕ್ಕೂ ಹೆಚ್ಚು ಮೈಸೂರಿಗರಿಗೆ ಸಿಎಂ ದೂರವಾಣಿ ಕರೆ

ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಅಗತ್ಯವಾಗಿರುವ ಎಲ್ಲಾ ನೆರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ ಸಿದ್ದರಾಮಯ್ಯ ಅವರು ತಮ್ಮ ಸಹಾಯಕ್ಕೆ ಸಚಿವ ಸಂತೋಷ್ ಲಾಡ್ ಹಾಗೂ ಕಮಿಷನರ್ ಬರ್ತಿದಾರೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.

ಹೌರಾದಲ್ಲಿ ಸಿಲುಕಿದ ರಾಜ್ಯದ ಕ್ರೀಡಾರ್ಥಿಗಳು : ಅಂತರರಾಜ್ಯ ಮಟ್ಟದ ವಾಲಿಬಾಲ್‌ ಜ್ಯೂನಿಯರ್ ಟೂರ್ನಿಗೆ ರಾಜ್ಯದ ವಿವಿಧ ಭಾಗಗಳಿಂದ ಹೋಗಿರುವ ಕ್ರೀಡಾಪಟುಗಳು ಪಶ್ಚಿಮಬಂಗಾಳದಲ್ಲಿ ಸಿಲುಕಿಕೊಂಡಿದ್ದಾರೆ. ಒಟ್ಟು 31 ಕ್ರೀಡಾಪಟುಗಳು ರಾಜ್ಯದಿಂದ ತೆರಳಿದ್ದರು. ಮೇ.24ಕ್ಕೆ ರಾಜ್ಯದಿಂದ ಹೌರಾಗೆ ತೆರಳಿದ್ದರು. ನಿನ್ನೆ ರಾತ್ರಿ ಅಂದರೆ 02/06/2023 ರಾತ್ರಿ 10.55ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿನಲ್ಲಿ ವಾಪಸ್ಸು ಬರಬೇಕಿತ್ತು. ರೈಲು ದುರಂತದ ಹಿನ್ನೆಲೆ ರೈಲುಗಳ ಸಂಚಾರ ರದ್ದಾಗಿದ್ದು, ವಾಪಸ್ಸು ರಾಜ್ಯಕ್ಕೆ ಬರಲು ಆಗದ ಕಾರಣ ಹೌರಾದಲ್ಲೇ ಕ್ರೀಡಾಪಟುಗಳು ಉಳಿದಿದ್ದಾರೆ.

ಸಚಿವ ಸಂತೋಷ್ ಲಾಡ್ ನಿಯೋಜನೆ : ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ. ಹೆಚ್‌ ಎಎಲ್ ವಿಮಾನ ನಿಲ್ದಾಣದಿಂದ ಸಂತೋಷ್ ಲಾಡ್ ಪ್ರಯಾಣ ಬೆಳಸಿದ್ದು, ತನ್ನದೇ ನಂಬರ್ ಅನ್ನು ಸಹಾಯಕ್ಕಾಗಿ ನೀಡಿದ್ದಾರೆ.

ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲು ಅಧಿಕಾರಿಗಳ ಜೊತೆ ಅಪಘಾತದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಪ್ರಧಾನಿ ಮೋದಿ ದೂರವಾಣಿ ಮೂಲಕ ಎನ್‌ಡಿಆರ್‌ಎಫ್ ಹಾಗೂ ರಕ್ಷಣಾ ತಂಡಗಳ ಮುಖ್ಯಸ್ಥರ ಜೊತೆಗೆ ಮಾತನಾಡಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಮೋದಿ, ಮಾಹಿತಿ ಪಡೆದುಕೊಂಡರು. ಬಳಿಕ ಕಟಕ್‌ಗೆ ತೆರಳಿದ್ದಾರೆ. ಆಸ್ಪತ್ರೆ ದಾಖಲಾಗಿರುವ ಗಾಯಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಎಲ್ಲಾ ನೆರವು ನೀಡುವುದಾಗಿ ಮೋದಿ ಹೇಳಿದ್ದಾರೆ. ಧೈರ್ಯವಾಗಿರಿ, ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದಿದ್ದಾರೆ.

ಘಟನೆಯಲ್ಲಿ ಮಡಿದವರ ಕುಟಂಬಕ್ಕೆ 10 ಲಕ್ಷ ರೂಪಾಯಿ, ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿ ಪರಿಹಾರವನ್ನು ರೈಲ್ವೇ ಸಚಿವಾಲಯ ಘೋಷಿಸಿದೆ. ಇನ್ನು ಎಲ್ಲಾ ಗಾಯಾಳುಗಳಿಗೆ ಅಗತ್ಯ ನೆರವನ್ನು ಸರ್ಕಾರ ನೀಡಲಿದೆ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

4 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

4 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

4 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

4 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

4 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

4 hours ago