BREAKING NEWS

ಒಡಿಶಾ ರೈಲು ದುರಂತ : ನೆರವಿಗೆ ಧಾವಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ವಾಲಿಬಾಲ್ ಕ್ರೀಡಾಪಟುಗಳು

ಬೆಂಗಳೂರು : ಕಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ. 

ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವಿಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ. 

ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ.

ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.

lokesh

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

9 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

9 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

14 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago