BREAKING NEWS

ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅಸ್ತು

ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.

ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಚೇತನ್ ಅಹಿಂಸಾ, ರಹಮತ್ ಉಲ್ಲಾ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಹಾಗೂ “ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ”(ಸಿಎಫ್‍ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ವಿರುದ್ಧ ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 15(1)(ಬಿ) ಅಡಿ ಕ್ರಮ ಕೈಗೊಳ್ಳಲು ಅನುಮತಿಸಬೇಕು ಎಂದು ಕೋರಿ ನಗರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು.

ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ತೀರ್ಪಿನಲ್ಲಿ ಆಘಾತಕಾರಿ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ. ಈಗ ಅದೇ ನ್ಯಾಯಮೂರ್ತಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ತೀರ್ಮಾನಿಸಲಿದ್ದಾರೆ. ಅವರಿಗೆ ಅಗತ್ಯವಾದ ಸ್ಪಷ್ಟತೆ ಇದೆಯೇ ಎಂದು ನಟ ಚೇತನ್ ಅವರು ಟ್ವೀಟ್ ನಲ್ಲಿ ಪ್ರಶ್ನೆ ಮಾಡಿದ್ದರು.

ಅಡ್ವೊಕೇಟ್ ಜನರಲ್ ಅವರು, ಇದು ದುರುದ್ದೇಶಪೂರಿತ, ವ್ಯಾಪ್ತಿ ಮೀರಿದ ಮತ್ತು ವಿವಾದಾತ್ಮಕ ಹೇಳಿಕೆಯಾಗಿದೆ. ನ್ಯಾಯಮೂರ್ತಿಯೊಬ್ಬರ ಮೇಲಿನ ನಿಷ್ಪಕ್ಷಪಾತದ ಬಗ್ಗೆ ಸಾರ್ವಜನಿಕರಿಗೆ ಸಂಶಯ ಮೂಡಿಸುವಂತಿದೆ. ಹೀಗಾಗಿ, ನಟ ಚೇತನ್ ಅಹಿಂಸಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅರ್ಜಿದಾರರಿಗೆ ಅನುಮತಿಸಿದ್ದೇನೆ ಎಂದು ಅಡ್ವೊಕೇಟ್ ಜನರಲ್ ವಿವರಿಸಿದ್ದಾರೆ.

ಹಿಜಾಬ್ ತೀರ್ಪಿಗೆ ಸಂಬಂಧಿಸಿದಂತೆ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ಆರ್. ರಹಮತ್ ಉಲ್ಲಾ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ಹೈಕೋರ್ಟ್ ಹಿಜಾಬ್ ತೀರ್ಪು ನೀಡಿದೆ. ಒಂದು ವೇಳೆ ನ್ಯಾಯಮೂರ್ತಿಗಳು ಕೊಲೆಯಾದರೆ ಅವರ ಸಾವಿಗೆ ಅವರೇ ಜವಾಬ್ದಾರಿ’ ಎಂದು ಮಧುರೈನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 2(ಸಿ) ಅಡಿ ನಿಂದನೆಗೆ ಸಮನಾಗಿದೆ. ಇಂತಹ ಹೇಳಿಕೆಯ ಮೂಲಕ ಅವರು ನ್ಯಾಯಾಂಗದ ಸ್ವಾತಂತ್ರ್ಯ, ಪ್ರಾಮಾಣಿಕತೆ ಮತ್ತು ನ್ಯಾಯಿಕ ಸಾಮಥ್ರ್ಯದ ಹಾಗೂ ನ್ಯಾಯಮೂರ್ತಿಗಳ ನಿಷ್ಪಕ್ಷಪಾತ ನಿಲುವಿನ ಮೇಲೆ ದಾಳಿ ಮಾಡುವುದರ ಜೊತೆಗೆ ನ್ಯಾಯಾಂಗದ ಘನತೆಗೆ ಕುಂದುಂಟು ಮಾಡಿದ್ದಾರೆ ಎಂದು ಎಜಿ ನೀಡಿರುವ ಅನುಮತಿ ಪತ್ರದಲ್ಲಿ ವಿವರಿಸಲಾಗಿದೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

10 mins ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

14 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

14 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

16 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

16 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

16 hours ago