BREAKING NEWS

ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್: ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅಸ್ತು

ಬೆಂಗಳೂರು : ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ನಟ ಚೇತನ್ ಅಹಿಂಸಾ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ರಹಮತ್ ಉಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕರ್ನಾಟಕದ ಅಡ್ವೊಕೇಟ್ ಜನರಲ್ (ಎಜಿ) ಕೆ.ಶಶಿಕಿರಣ್ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.

ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಚೇತನ್ ಅಹಿಂಸಾ, ರಹಮತ್ ಉಲ್ಲಾ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಹಾಗೂ “ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ”(ಸಿಎಫ್‍ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ವಿರುದ್ಧ ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 15(1)(ಬಿ) ಅಡಿ ಕ್ರಮ ಕೈಗೊಳ್ಳಲು ಅನುಮತಿಸಬೇಕು ಎಂದು ಕೋರಿ ನಗರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು.

ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ತೀರ್ಪಿನಲ್ಲಿ ಆಘಾತಕಾರಿ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ. ಈಗ ಅದೇ ನ್ಯಾಯಮೂರ್ತಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ತೀರ್ಮಾನಿಸಲಿದ್ದಾರೆ. ಅವರಿಗೆ ಅಗತ್ಯವಾದ ಸ್ಪಷ್ಟತೆ ಇದೆಯೇ ಎಂದು ನಟ ಚೇತನ್ ಅವರು ಟ್ವೀಟ್ ನಲ್ಲಿ ಪ್ರಶ್ನೆ ಮಾಡಿದ್ದರು.

ಅಡ್ವೊಕೇಟ್ ಜನರಲ್ ಅವರು, ಇದು ದುರುದ್ದೇಶಪೂರಿತ, ವ್ಯಾಪ್ತಿ ಮೀರಿದ ಮತ್ತು ವಿವಾದಾತ್ಮಕ ಹೇಳಿಕೆಯಾಗಿದೆ. ನ್ಯಾಯಮೂರ್ತಿಯೊಬ್ಬರ ಮೇಲಿನ ನಿಷ್ಪಕ್ಷಪಾತದ ಬಗ್ಗೆ ಸಾರ್ವಜನಿಕರಿಗೆ ಸಂಶಯ ಮೂಡಿಸುವಂತಿದೆ. ಹೀಗಾಗಿ, ನಟ ಚೇತನ್ ಅಹಿಂಸಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅರ್ಜಿದಾರರಿಗೆ ಅನುಮತಿಸಿದ್ದೇನೆ ಎಂದು ಅಡ್ವೊಕೇಟ್ ಜನರಲ್ ವಿವರಿಸಿದ್ದಾರೆ.

ಹಿಜಾಬ್ ತೀರ್ಪಿಗೆ ಸಂಬಂಧಿಸಿದಂತೆ, ತಮಿಳುನಾಡಿನ ‘ತೌಹೀದ್ ಜಮಾತ್’ ಅಧ್ಯಕ್ಷ ಆರ್. ರಹಮತ್ ಉಲ್ಲಾ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ಹೈಕೋರ್ಟ್ ಹಿಜಾಬ್ ತೀರ್ಪು ನೀಡಿದೆ. ಒಂದು ವೇಳೆ ನ್ಯಾಯಮೂರ್ತಿಗಳು ಕೊಲೆಯಾದರೆ ಅವರ ಸಾವಿಗೆ ಅವರೇ ಜವಾಬ್ದಾರಿ’ ಎಂದು ಮಧುರೈನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ನ್ಯಾಯಾಂಗ ನಿಂದನೆ ಕಾಯ್ದೆಯ ಕಲಂ 2(ಸಿ) ಅಡಿ ನಿಂದನೆಗೆ ಸಮನಾಗಿದೆ. ಇಂತಹ ಹೇಳಿಕೆಯ ಮೂಲಕ ಅವರು ನ್ಯಾಯಾಂಗದ ಸ್ವಾತಂತ್ರ್ಯ, ಪ್ರಾಮಾಣಿಕತೆ ಮತ್ತು ನ್ಯಾಯಿಕ ಸಾಮಥ್ರ್ಯದ ಹಾಗೂ ನ್ಯಾಯಮೂರ್ತಿಗಳ ನಿಷ್ಪಕ್ಷಪಾತ ನಿಲುವಿನ ಮೇಲೆ ದಾಳಿ ಮಾಡುವುದರ ಜೊತೆಗೆ ನ್ಯಾಯಾಂಗದ ಘನತೆಗೆ ಕುಂದುಂಟು ಮಾಡಿದ್ದಾರೆ ಎಂದು ಎಜಿ ನೀಡಿರುವ ಅನುಮತಿ ಪತ್ರದಲ್ಲಿ ವಿವರಿಸಲಾಗಿದೆ.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

23 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

23 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

23 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

23 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

23 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

23 hours ago