BREAKING NEWS

ಕೆಎಂಎಫ್‌ ಮುಳುಗಿಸಲು ಅಧಿಕಾರಿಗಳೂ ಶಾಮೀಲು: ಕುಮಾರಸ್ವಾಮಿ ಆರೋಪ

ರಾಮನಗರ: ‘ ಕೆಎಂಎಫ್‌ ಅನ್ನು ಹಂತಹಂತವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಣದ ಆಸೆಯಾಗಿ ಕೆಎಂಎಫ್‌ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಅಮುಲ್ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಗುಜರಾತಿನವರನ್ನು ಓಲೈಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದರ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ. ರೈತರ ಬದುಕಿನಲ್ಲಿ ಚೆಲ್ಲಾಟ ಆಡಬಾರದು’ ಎಂದು ಎಚ್ಚರಿಸಿದರು.

ಎರಡನೇ ಪಟ್ಟಿ ವಿಳಂಬ

‘ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರದ ನಂತರ ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ಸಿನವರು ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಈಗ ಅದು ಯೂ ಟರ್ನ್ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್‌ನಿಂದ 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಜೆಡಿಎಸ್‌ನತ್ತ ಮುಖ ಮಾಡಿದ್ದು, ನಮ್ಮ ಅಭ್ಯರ್ಥಿಗಳ ಕೊರತೆಯೂ ನೀಗುತ್ತಿದೆ. 120ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಾತಾವರಣ ನಿರ್ಮಾಣ ಆಗುತ್ತಿದೆ. ರಾಷ್ಟ್ರೀಯ ಪಕ್ಷ ಇನ್ನೂ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ ’ ಎಂದರು.

ಅಧಿಕಾರಿಗಳಿಗೆ ಎಚ್ಚರಿಕೆ:

‘ ಜೆಡಿಎಸ್ ಪ್ರಚಾರ ವಾಹನಗಳಿಗೆ ಇದೇ 8ರವರೆಗೆ ಪ್ರಚಾರಕ್ಕೆ ಅನುಮತಿ ಪಡೆದಿದ್ದೇವೆ. ಆದಾಗ್ಯೂ ಅಧಿಕಾರಿಗಳು ಶನಿವಾರ ಯಶವಂತಪುರದಲ್ಲಿ ನಮ್ಮ ವಾಹನಗಳನ್ನು ತಡೆದಿದ್ದಾರೆ. ಈ ಅಧಿಕಾರಿಗಳಿಗೆ ಕಾನೂನು ಗೊತ್ತಿದೆಯೋ ಇಲ್ಲ ಸೋಮಶೇಖರ್ ಬಳಿ ತರಬೇತಿ ಪಡೆದಿದ್ದಾರೋ ಗೊತ್ತಿಲ್ಲ. ಕೊಂಚ ಎಚ್ಚರಿಕೆಯಿಂದ ವರ್ತಿಸಿ. ನೀತಿಸಂಹಿತೆ ಪ್ರಕಾರ ನಡೆದುಕೊಳ್ಳಿ. ದಬ್ಬಾಳಿಕೆ ತೋರಿದರೆ ಮುಂದೆ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತೀರಿ’ ಎಂದು ಎಚ್ಚರಿಸಿದರು.

ಒಂದೇ ಕ್ಷೇತ್ರದಿಂದ ಸ್ಪರ್ಧೆ:

ಈ ಬಾರಿ ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ನನ್ನ ಸ್ಪರ್ಧೆ. ಕಾರ್ಯಕರ್ತರ ಒತ್ತಡ ಇರುವ ಕ್ಷೇತ್ರಗಳಲ್ಲೂ ಬೇರೆ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಹುಲಿ ವಿಹಾರಕ್ಕಾಗಿ ಭೇಟಿ:

ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ ಅವರು ಹುಲಿ ವಿಹಾರಕ್ಕಾಗಿ ಬರುತ್ತಿದ್ದಾರೆಯೇ ಹೊರತು ರಾಜ್ಯದ ಜನರ ಕಷ್ಟ ಕೇಳಲು ಬರುತ್ತಿಲ್ಲ. ದೇಶದ ಅಭಿವೃದ್ಧಿ ಮಾಡಿ ಸುಸ್ತಾಗಿದ್ದಾರೆ. ಹೀಗಾಗಿ ವಿಶ್ರಾಂತಿಗಾಗಿ ರಾಜ್ಯಕ್ಕೆ ಬರುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

andolanait

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

11 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

43 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago