BREAKING NEWS

ಕೆಎಂಎಫ್‌ ಮುಳುಗಿಸಲು ಅಧಿಕಾರಿಗಳೂ ಶಾಮೀಲು: ಕುಮಾರಸ್ವಾಮಿ ಆರೋಪ

ರಾಮನಗರ: ‘ ಕೆಎಂಎಫ್‌ ಅನ್ನು ಹಂತಹಂತವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಣದ ಆಸೆಯಾಗಿ ಕೆಎಂಎಫ್‌ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಅಮುಲ್ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಗುಜರಾತಿನವರನ್ನು ಓಲೈಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದರ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ. ರೈತರ ಬದುಕಿನಲ್ಲಿ ಚೆಲ್ಲಾಟ ಆಡಬಾರದು’ ಎಂದು ಎಚ್ಚರಿಸಿದರು.

ಎರಡನೇ ಪಟ್ಟಿ ವಿಳಂಬ

‘ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರದ ನಂತರ ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ಸಿನವರು ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಈಗ ಅದು ಯೂ ಟರ್ನ್ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್‌ನಿಂದ 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಜೆಡಿಎಸ್‌ನತ್ತ ಮುಖ ಮಾಡಿದ್ದು, ನಮ್ಮ ಅಭ್ಯರ್ಥಿಗಳ ಕೊರತೆಯೂ ನೀಗುತ್ತಿದೆ. 120ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಾತಾವರಣ ನಿರ್ಮಾಣ ಆಗುತ್ತಿದೆ. ರಾಷ್ಟ್ರೀಯ ಪಕ್ಷ ಇನ್ನೂ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ ’ ಎಂದರು.

ಅಧಿಕಾರಿಗಳಿಗೆ ಎಚ್ಚರಿಕೆ:

‘ ಜೆಡಿಎಸ್ ಪ್ರಚಾರ ವಾಹನಗಳಿಗೆ ಇದೇ 8ರವರೆಗೆ ಪ್ರಚಾರಕ್ಕೆ ಅನುಮತಿ ಪಡೆದಿದ್ದೇವೆ. ಆದಾಗ್ಯೂ ಅಧಿಕಾರಿಗಳು ಶನಿವಾರ ಯಶವಂತಪುರದಲ್ಲಿ ನಮ್ಮ ವಾಹನಗಳನ್ನು ತಡೆದಿದ್ದಾರೆ. ಈ ಅಧಿಕಾರಿಗಳಿಗೆ ಕಾನೂನು ಗೊತ್ತಿದೆಯೋ ಇಲ್ಲ ಸೋಮಶೇಖರ್ ಬಳಿ ತರಬೇತಿ ಪಡೆದಿದ್ದಾರೋ ಗೊತ್ತಿಲ್ಲ. ಕೊಂಚ ಎಚ್ಚರಿಕೆಯಿಂದ ವರ್ತಿಸಿ. ನೀತಿಸಂಹಿತೆ ಪ್ರಕಾರ ನಡೆದುಕೊಳ್ಳಿ. ದಬ್ಬಾಳಿಕೆ ತೋರಿದರೆ ಮುಂದೆ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತೀರಿ’ ಎಂದು ಎಚ್ಚರಿಸಿದರು.

ಒಂದೇ ಕ್ಷೇತ್ರದಿಂದ ಸ್ಪರ್ಧೆ:

ಈ ಬಾರಿ ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ನನ್ನ ಸ್ಪರ್ಧೆ. ಕಾರ್ಯಕರ್ತರ ಒತ್ತಡ ಇರುವ ಕ್ಷೇತ್ರಗಳಲ್ಲೂ ಬೇರೆ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಹುಲಿ ವಿಹಾರಕ್ಕಾಗಿ ಭೇಟಿ:

ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ ಅವರು ಹುಲಿ ವಿಹಾರಕ್ಕಾಗಿ ಬರುತ್ತಿದ್ದಾರೆಯೇ ಹೊರತು ರಾಜ್ಯದ ಜನರ ಕಷ್ಟ ಕೇಳಲು ಬರುತ್ತಿಲ್ಲ. ದೇಶದ ಅಭಿವೃದ್ಧಿ ಮಾಡಿ ಸುಸ್ತಾಗಿದ್ದಾರೆ. ಹೀಗಾಗಿ ವಿಶ್ರಾಂತಿಗಾಗಿ ರಾಜ್ಯಕ್ಕೆ ಬರುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

4 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

5 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

5 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

5 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

6 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

6 hours ago