ರಾಮನಗರ: ‘ ಕೆಎಂಎಫ್ ಅನ್ನು ಹಂತಹಂತವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಣದ ಆಸೆಯಾಗಿ ಕೆಎಂಎಫ್ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಅಮುಲ್ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಗುಜರಾತಿನವರನ್ನು ಓಲೈಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದರ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ. ರೈತರ ಬದುಕಿನಲ್ಲಿ ಚೆಲ್ಲಾಟ ಆಡಬಾರದು’ ಎಂದು ಎಚ್ಚರಿಸಿದರು.
ಎರಡನೇ ಪಟ್ಟಿ ವಿಳಂಬ
‘ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರದ ನಂತರ ಬಿಡುಗಡೆ ಮಾಡಲಾಗುವುದು. ಕಾಂಗ್ರೆಸ್ಸಿನವರು ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರು. ಈಗ ಅದು ಯೂ ಟರ್ನ್ ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ನಿಂದ 15ಕ್ಕೂ ಹೆಚ್ಚು ಸಮರ್ಥ ಅಭ್ಯರ್ಥಿಗಳು ಜೆಡಿಎಸ್ನತ್ತ ಮುಖ ಮಾಡಿದ್ದು, ನಮ್ಮ ಅಭ್ಯರ್ಥಿಗಳ ಕೊರತೆಯೂ ನೀಗುತ್ತಿದೆ. 120ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಾತಾವರಣ ನಿರ್ಮಾಣ ಆಗುತ್ತಿದೆ. ರಾಷ್ಟ್ರೀಯ ಪಕ್ಷ ಇನ್ನೂ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ ’ ಎಂದರು.
ಅಧಿಕಾರಿಗಳಿಗೆ ಎಚ್ಚರಿಕೆ:
‘ ಜೆಡಿಎಸ್ ಪ್ರಚಾರ ವಾಹನಗಳಿಗೆ ಇದೇ 8ರವರೆಗೆ ಪ್ರಚಾರಕ್ಕೆ ಅನುಮತಿ ಪಡೆದಿದ್ದೇವೆ. ಆದಾಗ್ಯೂ ಅಧಿಕಾರಿಗಳು ಶನಿವಾರ ಯಶವಂತಪುರದಲ್ಲಿ ನಮ್ಮ ವಾಹನಗಳನ್ನು ತಡೆದಿದ್ದಾರೆ. ಈ ಅಧಿಕಾರಿಗಳಿಗೆ ಕಾನೂನು ಗೊತ್ತಿದೆಯೋ ಇಲ್ಲ ಸೋಮಶೇಖರ್ ಬಳಿ ತರಬೇತಿ ಪಡೆದಿದ್ದಾರೋ ಗೊತ್ತಿಲ್ಲ. ಕೊಂಚ ಎಚ್ಚರಿಕೆಯಿಂದ ವರ್ತಿಸಿ. ನೀತಿಸಂಹಿತೆ ಪ್ರಕಾರ ನಡೆದುಕೊಳ್ಳಿ. ದಬ್ಬಾಳಿಕೆ ತೋರಿದರೆ ಮುಂದೆ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತೀರಿ’ ಎಂದು ಎಚ್ಚರಿಸಿದರು.
ಒಂದೇ ಕ್ಷೇತ್ರದಿಂದ ಸ್ಪರ್ಧೆ:
ಈ ಬಾರಿ ಚನ್ನಪಟ್ಟಣ ಕ್ಷೇತ್ರದಿಂದ ಮಾತ್ರ ನನ್ನ ಸ್ಪರ್ಧೆ. ಕಾರ್ಯಕರ್ತರ ಒತ್ತಡ ಇರುವ ಕ್ಷೇತ್ರಗಳಲ್ಲೂ ಬೇರೆ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಹುಲಿ ವಿಹಾರಕ್ಕಾಗಿ ಭೇಟಿ:
ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ ಅವರು ಹುಲಿ ವಿಹಾರಕ್ಕಾಗಿ ಬರುತ್ತಿದ್ದಾರೆಯೇ ಹೊರತು ರಾಜ್ಯದ ಜನರ ಕಷ್ಟ ಕೇಳಲು ಬರುತ್ತಿಲ್ಲ. ದೇಶದ ಅಭಿವೃದ್ಧಿ ಮಾಡಿ ಸುಸ್ತಾಗಿದ್ದಾರೆ. ಹೀಗಾಗಿ ವಿಶ್ರಾಂತಿಗಾಗಿ ರಾಜ್ಯಕ್ಕೆ ಬರುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…