BREAKING NEWS

UPSC ಯಿಂದ ನೇಮಕವಾದ ಅಧಿಕಾರಿಗಳು ದರೋಡೆಕೋರರು : ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

ಹೊಸದಿಲ್ಲಿ : ದೇಶದ ಉನ್ನತಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯುಪಿಎಸ್‌ಸಿಯಿಂದ ನೇಮಕವಾಗುತ್ತಾರೆ. ಭಾರತದ ಕಾರ್ಯಾಂಗದಲ್ಲಿ ಯುಪಿಎಸ್‌ಸಿಗೆ ಬಹಳಷ್ಟು ಪ್ರಾಮುಖ್ಯತೆ ಇದೆ. ಆದರೆ, ಇದರ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಬಿಶ್ವೇಶ್ವರ್‌ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದು, ಯುಪಿಎಸ್‌ ಮೂಲಕ ನೇಮಕಗೊಂಡಿರುವ ಹಲವು ಅಧಿಕಾರಿಗಳನ್ನು ದರೋಡೆಕೋರರು ಎಂದು ಕರೆದಿದ್ದಾರೆ.

ನಮ್ಮ ದೇಶದಲ್ಲಿ ಕೋಳಿ ಕಳ್ಳನಿಗೆ ಶಿಕ್ಷೆಯಾಗುತ್ತದೆ. ಆದರೆ, ಖನಿಜ ಮಾಫಿಯಾ ನಡೆಸುವ ಅಧಿಕಾರಿಯನ್ನು ಮುಟ್ಟಲು ಸಾಧ್ಯವಿಲ್ಲ. ಏಕೆಂದರೆ ವ್ಯವಸ್ಥೆ ಅವನನ್ನು ರಕ್ಷಿಸುತ್ತದೆ ಎಂದು ಬಿಶ್ವೇಶ್ವರ್‌ ತುಡು ಆರೋಪಿಸಿದರು. ವೈರಲ್‌ ಆಗಿರುವ ವಿಡಿಯೋದಲ್ಲಿ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದು ಕಂಡುಬಂದಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತ ಜಲಶಕ್ತಿ ಮಂತ್ರಾಲಯದ ರಾಜ್ಯ ಸಚಿವರಾಗಿರುವ ಬಿಶ್ವೇಶ್ವರ್‌ ತುಡು, ಓಡಿಶಾದ ಬಾಲಸೋರ್ ಜಿಲ್ಲೆಯ ಬಲಿಪಾಲ್‌ನಲ್ಲಿರುವ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಯುಪಿಎಸ್‌ಸಿ ಮೂಲಕ ನೇಮಕಗೊಂಡವರು ಅಧಿಕಾರಿಗಳು ಅತ್ಯಂತ ಜ್ಞಾನವುಳ್ಳ ವ್ಯಕ್ತಿಗಳು ಮತ್ತು ಯಾವಾಗಲೂ ಉನ್ನತ ಹುದ್ದೆಗಳಲ್ಲಿರುತ್ತಾರೆ ಎಂಬ ಕಲ್ಪನೆ ನನಗಿತ್ತು. ಆದರೆ ಈಗ ಯುಪಿಎಸ್‌ಸಿಯಿಂದ ನೇಮಕವಾದವರಲ್ಲಿ ಹೆಚ್ಚಿನವರು ದರೋಡೆಕೋರರು ಎಂದು ನಾನು ಭಾವಿಸುತ್ತೇನೆ. ಆದರೆ, ಶೇ.100ಕ್ಕೆ 100 ಅಧಿಕಾರಿಗಳು ಅದೇ ರೀತಿ ಇದ್ದಾರೆ ಎಂದು ನಾನು ಹೇಳುವುದಿಲ್ಲ. ಹಲವರು ದರೋಡೆಕೋರರು ಇದ್ದಾರೆ ಎಂದು ಬಿಶ್ವೇಶ್ವರ್‌ ತುಡು ಹೇಳಿದ್ದಾರೆ.

ಭಾರತದ ಪ್ರಮುಖ ನೇಮಕಾತಿ ಸಂಸ್ಥೆ : ಯುಪಿಎಸ್‌ಸಿ ದೇಶದ ಪ್ರಧಾನ ಕೇಂದ್ರ ನೇಮಕಾತಿ ಆಯೋಗವಾಗಿದ್ದು, ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಉನ್ನತ ಅಧಿಕಾರಿಗಳನ್ನು ನೇಮಿಸುತ್ತದೆ. ಪ್ರತಿ ವರ್ಷ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಯುಪಿಎಸ್‌ಸಿ ಪ್ರಮುಖವಾಗಿ ನಾಗರೀಕ ಸೇವಾ ಪರೀಕ್ಷೆಯನ್ನು ನಡೆಸುತ್ತದೆ. ಇದರ ಮೂಲಕವೇ ಐಎಎಸ್‌, ಐಪಿಎಸ್‌, ಐಎಫ್‌ಎಸ್‌, ಐಆರ್‌ಎಸ್‌ ಅಧಿಕಾರಿಗಳು ನೇಮಕವಾಗುತ್ತಾರೆ. ಓಡಿಶಾದ ಸಂಸದರಾಗಿರುವ ಬಿಶ್ವೇಶ್ವರ್‌ ತುಡು ಅವರ ದಿಲ್ಲಿ ನಿವಾಸದ ಹಿಂದೆಯೇ ಯುಪಿಎಸ್‌ಸಿ ಕಚೇರಿ ಇದೆ. ಆರಂಭದಲ್ಲಿ ಯುಪಿಎಸ್‌ಸಿ ಬಗ್ಗೆ ನಾನು ಹೆಚ್ಚಿನ ಗೌರವ ಹೊಂದಿದ್ದೆ. ಆದರೆ, ಅದು ಈಗ ಬದಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕತೆಯ ಕೊರತೆ : ಇನ್ನು, ತಮ್ಮ ಭಾಷಣದಲ್ಲಿ ಮುಂದುವರೆದು ಬಿಶ್ವೇಶ್ವರ್‌ ತುಡು ಅವರು, ನಮ್ಮ ದೇಶದಲ್ಲಿ ಇಂತಹ ವಿದ್ಯಾವಂತರು ಇದ್ದರು ನಮ್ಮ ಸಮಾಜ ಏಕೆ ಭ್ರಷ್ಟಾಚಾರ ಮತ್ತು ಅನ್ಯಾಯದಲ್ಲಿ ಮುಳುಗಿದೆ ಎಂದು ಮಕ್ಕಳನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿನ ನೈತಿಕತೆಯ ಕೊರತೆ. ನಮ್ಮಲ್ಲಿ ಆಧ್ಯಾತ್ಮಿಕ ಶಿಕ್ಷಣ ಮತ್ತು ಆಲೋಚನೆಗಳ ಕೊರತೆ ಎಂದು ಹೇಳಿದ್ದಾರೆ. ಅದಲ್ಲದೇ, 2021ರಲ್ಲಿ ಮಯೂರ್‌ಭಂಜ್‌ನ ತಮ್ಮ ಕ್ಷೇತ್ರದಲ್ಲಿ ಓಡಿಶಾದ ಸರ್ಕಾರಿ ಅಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಶ್ವೇಶ್ವರ್‌ ತುಡು ವಿವಾದವನ್ನು ಸೃಷ್ಟಿಸಿದ್ದರು.

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

4 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

4 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

4 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

4 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

4 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

4 hours ago