BREAKING NEWS

ವೋಟರ್ ಸ್ಲಿಪ್ ತಂದಿಲ್ಲ ಎಂದು ರಾಜಮನೆತನದವರನ್ನೇ ವಾಪಸ್ ಕಳಿಸಿದ ಅಧಿಕಾರಿಗಳು

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ ವೋಟರ್ ಸ್ಲಿಪ್ ತೆಗೆದುಕೊಂಡು ಬಂದ ಅಪರೂಪದ ಘಟನೆ ನಡೆದಿದೆ.
ಮತದಾನ ಮಾಡಲು ಬರುವವರು ವೋಟರ್ ಐಡಿ ಜೊತೆ ವೋಟರ್ ಸ್ಲಿಪ್ ಕೂಡ ತೆಗೆದುಕೊಂಡು ಬರಬೇಕು. ಆದ್ರೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ವೋಟರ್ ಸ್ಲಿಪನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಯ ಬಳಿ ಬಂದಿದ್ರು. ಈ ವೇಳೆ ಚುನಾವಣಾ ಅಧಿಕಾರಿಗಳು ಅವರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ.
ಆಗ ಅವರು ತಮ್ಮ ಮೊಬೈಲ್‌ನಲ್ಲಿದ್ದ ಸಾಫ್ಟ್ ಕಾಪಿಯನ್ನು ತೋರಿಸಿದ್ದಾರೆ. ಆದರೆ ಇದಕ್ಕೆ ಮತಗಟ್ಟೆ ಅಧಿಕಾರಿಗಳು ಒಪ್ಪಿಗೆ ನೀಡಿಲ್ಲ. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಎಂದು ಈ ಮೂಲಕ ಮತಗಟ್ಟೆ ಅಧಿಕಾರಿಗಳು ಸಾರಿದ್ದಾರೆ. ಹೀಗಾಗಿ ವೋಟರ್ ಸ್ಲಿಪ್ ತರಲು ಮತಗಟ್ಟೆಯಿಂದ ಪ್ರಮೋದಾದೇವಿ ಒಡೆಯರ್ ವಾಪಸ್ ತೆರಳಿದರು. ಮತಗಟ್ಟೆಯ ಮುಂಭಾಗದಲ್ಲೇ ಕಾರಿನಲ್ಲಿ ಕುಳಿತು ಮೊಬೈಲ್​ನಲ್ಲಿದ್ದ ಸಾಫ್ಟ್‌ ಕಾಪಿ ಪ್ರಿಂಟ್ ಪಡೆದು ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮತ ಚಲಾಯಿಸಿದರು.‌
ಮತದಾನದ ಬಳಿಕ ಮಾತನಾಡಿದ ಅವರು, ಮೊದಲೆಲ್ಲಾ ಪಾರ್ಟಿಯಿಂದ ಚೀಟಿ ಕೊಡುತ್ತಿದ್ದರು. ಈ ಬಾರಿ ಕಚೇರಿಯಿಂದ ಚೀಟಿ ಕೊಟ್ಟಿದ್ದಾರೆ. ಅದರಲ್ಲಿ‌ ಎಲ್ಲಾ ಮಾಹಿತಿ ಇದೆ. ಅದರ ಭರವಸೆ ಮೇಲೆ ಬೇರೆ ಚೀಟಿ ಕೊಡಲ್ಲ ಅಂತ ಬಂದಿದ್ದೆ. ಆದು ಸಾಲಲ್ಲ, ಬೇರೆ ದಾಖಲೆ ಬೇಕು ಅಂತ ಹೇಳಿದರು. ಆಫೀಸಿನಿಂದ ಬಂದ ಚೀಟಿಯಿಂದಾಗಿ ಬೇರೆ ದಾಖಲೆ ತಂದಿರಲಿಲ್ಲ. ಹಾಗಾಗಿ ಮತದಾನ‌ ತಡವಾಯ್ತು. ಸಾಫ್ಟ್ ಕಾಪಿಯಲ್ಲಿ ಹಾಕಿದ್ದಾರೆ.
ಡಿಜಿಟಲ್ ಕಾಪಿ ಅಲೋ ಮಾಡಲ್ಲ ಅಂತ ಗೊತ್ತಿರಲಿಲ್ಲ. ಯುವಕರು ಮತದಾನದ ಮೂಲಕ ತಮ್ಮ ಭಾವನೆ ವ್ಯಕ್ತ ಪಡಿಸಬೇಕು. ಅಲ್ಲದೆ ನಮ್ಮ ಧ್ವನಿ ಕೇಳಲ್ಲ ಅಂದರೆ ಏನೂ ಮಾಡಲು ಆಗುವುದಿಲ್ಲ. ಅವಕಾಶ ಸಿಕ್ಕಾಗ ನಿಮ್ಮ ಭಾವನೆ ವ್ಯಕ್ತಪಡಿಸಿ. ನಿಮ್ಮ ನಿರಾಸಕ್ತಿ ಇದ್ದರು ಅದನ್ನು ಇಲ್ಲಿ ಬಂದು ವ್ಯಕ್ತಪಡಿಸಿ. ನಾನೂ ಕೂಡ ಅದೇ ಉದ್ದೇಶದಿಂದ ಮತದಾನ ಮಾಡಿದ್ದೇನೆ ಎಂದರು.
lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago