BREAKING NEWS

ವೋಟರ್ ಸ್ಲಿಪ್ ತಂದಿಲ್ಲ ಎಂದು ರಾಜಮನೆತನದವರನ್ನೇ ವಾಪಸ್ ಕಳಿಸಿದ ಅಧಿಕಾರಿಗಳು

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ ವೋಟರ್ ಸ್ಲಿಪ್ ತೆಗೆದುಕೊಂಡು ಬಂದ ಅಪರೂಪದ ಘಟನೆ ನಡೆದಿದೆ.
ಮತದಾನ ಮಾಡಲು ಬರುವವರು ವೋಟರ್ ಐಡಿ ಜೊತೆ ವೋಟರ್ ಸ್ಲಿಪ್ ಕೂಡ ತೆಗೆದುಕೊಂಡು ಬರಬೇಕು. ಆದ್ರೆ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ವೋಟರ್ ಸ್ಲಿಪನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಯ ಬಳಿ ಬಂದಿದ್ರು. ಈ ವೇಳೆ ಚುನಾವಣಾ ಅಧಿಕಾರಿಗಳು ಅವರಿಗೆ ಮತ ಚಲಾಯಿಸಲು ಅವಕಾಶ ನೀಡಿಲ್ಲ.
ಆಗ ಅವರು ತಮ್ಮ ಮೊಬೈಲ್‌ನಲ್ಲಿದ್ದ ಸಾಫ್ಟ್ ಕಾಪಿಯನ್ನು ತೋರಿಸಿದ್ದಾರೆ. ಆದರೆ ಇದಕ್ಕೆ ಮತಗಟ್ಟೆ ಅಧಿಕಾರಿಗಳು ಒಪ್ಪಿಗೆ ನೀಡಿಲ್ಲ. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ ಎಂದು ಈ ಮೂಲಕ ಮತಗಟ್ಟೆ ಅಧಿಕಾರಿಗಳು ಸಾರಿದ್ದಾರೆ. ಹೀಗಾಗಿ ವೋಟರ್ ಸ್ಲಿಪ್ ತರಲು ಮತಗಟ್ಟೆಯಿಂದ ಪ್ರಮೋದಾದೇವಿ ಒಡೆಯರ್ ವಾಪಸ್ ತೆರಳಿದರು. ಮತಗಟ್ಟೆಯ ಮುಂಭಾಗದಲ್ಲೇ ಕಾರಿನಲ್ಲಿ ಕುಳಿತು ಮೊಬೈಲ್​ನಲ್ಲಿದ್ದ ಸಾಫ್ಟ್‌ ಕಾಪಿ ಪ್ರಿಂಟ್ ಪಡೆದು ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮತ ಚಲಾಯಿಸಿದರು.‌
ಮತದಾನದ ಬಳಿಕ ಮಾತನಾಡಿದ ಅವರು, ಮೊದಲೆಲ್ಲಾ ಪಾರ್ಟಿಯಿಂದ ಚೀಟಿ ಕೊಡುತ್ತಿದ್ದರು. ಈ ಬಾರಿ ಕಚೇರಿಯಿಂದ ಚೀಟಿ ಕೊಟ್ಟಿದ್ದಾರೆ. ಅದರಲ್ಲಿ‌ ಎಲ್ಲಾ ಮಾಹಿತಿ ಇದೆ. ಅದರ ಭರವಸೆ ಮೇಲೆ ಬೇರೆ ಚೀಟಿ ಕೊಡಲ್ಲ ಅಂತ ಬಂದಿದ್ದೆ. ಆದು ಸಾಲಲ್ಲ, ಬೇರೆ ದಾಖಲೆ ಬೇಕು ಅಂತ ಹೇಳಿದರು. ಆಫೀಸಿನಿಂದ ಬಂದ ಚೀಟಿಯಿಂದಾಗಿ ಬೇರೆ ದಾಖಲೆ ತಂದಿರಲಿಲ್ಲ. ಹಾಗಾಗಿ ಮತದಾನ‌ ತಡವಾಯ್ತು. ಸಾಫ್ಟ್ ಕಾಪಿಯಲ್ಲಿ ಹಾಕಿದ್ದಾರೆ.
ಡಿಜಿಟಲ್ ಕಾಪಿ ಅಲೋ ಮಾಡಲ್ಲ ಅಂತ ಗೊತ್ತಿರಲಿಲ್ಲ. ಯುವಕರು ಮತದಾನದ ಮೂಲಕ ತಮ್ಮ ಭಾವನೆ ವ್ಯಕ್ತ ಪಡಿಸಬೇಕು. ಅಲ್ಲದೆ ನಮ್ಮ ಧ್ವನಿ ಕೇಳಲ್ಲ ಅಂದರೆ ಏನೂ ಮಾಡಲು ಆಗುವುದಿಲ್ಲ. ಅವಕಾಶ ಸಿಕ್ಕಾಗ ನಿಮ್ಮ ಭಾವನೆ ವ್ಯಕ್ತಪಡಿಸಿ. ನಿಮ್ಮ ನಿರಾಸಕ್ತಿ ಇದ್ದರು ಅದನ್ನು ಇಲ್ಲಿ ಬಂದು ವ್ಯಕ್ತಪಡಿಸಿ. ನಾನೂ ಕೂಡ ಅದೇ ಉದ್ದೇಶದಿಂದ ಮತದಾನ ಮಾಡಿದ್ದೇನೆ ಎಂದರು.
lokesh

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

4 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

9 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

9 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

9 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

14 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

14 hours ago