ಮೈಸೂರು : ಬೇಸಿಗೆ ಹಿನ್ನಲೆ ಕುಡಿಯುವ ನೀರು ಸಮಸ್ಯೆ ಇರುವ ಜಾಗಕ್ಕೆ ಅಧಿಕಾರಿಗಳೆ ಖುದ್ದು ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.
ಮುಖ್ಯ ಮಂತ್ರಿಗಳ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ ಅಧಿಕಾರಿಗಳು ಖುದ್ದು ಭೇಟಿ ಕುಡಿಯುವ ನೀರು ಸಮಸ್ಯೆಯಾಗದಂತೆ ಆದ್ಯತೆಯ ಮೇರೆಗೆ ಅಗತ್ಯ ಕ್ರಮ ವಹಿಸಬೇಕು ತಿಳಿಸಿದರು.
ಚುನಾವಣೆ ಘೋಷಣೆಯಾದರೂ ಬರ ನಿರ್ವಹಣಾ ಕಾರ್ಯಕ್ಕೆ ತೊಂದರೆ ಇಲ್ಲ. ಸಾಕಷ್ಟು ಹಣಕಾಸು ಲಭ್ಯವಿರುವುದರಿಂದ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರನ್ನು ಕುಡಿಯುವ ನೀರು ಸಮಸ್ಯೆಗೆ ನೋಡೆಲ್ ಇಂಜಿನಿಯರ್ ನೇಮಕ ಮಾಡಬೇಕು. ಅವರು ಪ್ರತಿದಿನ ವರದಿ ನೀಡುವಂತೆ ಸಭೆಯಲ್ಲಿ ತಿಳಿಸಿದರು.
ಕುಡಿಯುವ ನೀರು ಪೂರೈಕೆ ಮಾಡುವಾಗ ನಿಯಮಿತವಾಗಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮಾಡಿ ನೀರು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…