BREAKING NEWS

ರಷ್ಯಾದಿಂದ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ

ಮಾಸ್ಕೊ: 2022ರಲ್ಲಿ ರಷ್ಯಾ ದೇಶವು ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು 22 ಪಟ್ಟು ಹೆಚ್ಚಳ ಕಂಡಿದೆ ಎಂದು ರಷ್ಯಾದ ಉಪ ಪ್ರಧಾನಿ ಮಂಗಳವಾರ ಹೇಳಿದ್ದಾರೆ.

ರಷ್ಯಾ–ಉಕ್ರೇನ್ ಸಂಘರ್ಷ ಆರಂಭವಾದ ನಂತರದಲ್ಲಿ ಐರೋಪ್ಯ ಒಕ್ಕೂಟದ ದೇಶಗಳು ರಷ್ಯಾ ಇಂಧನದ ಮೇಲಿನ ಅವಲಂಬನೆಯನ್ನು ತಗ್ಗಿಸಲು ಮುಂದಾದವು. ಆಗ ರಷ್ಯಾ, ಭಾರತ ಮತ್ತು ಚೀನಾಕ್ಕೆ ಕಚ್ಚಾ ತೈಲ ರಫ್ತು ಹೆಚ್ಚಿಸಲು ಆರಂಭಿಸಿತು.

ಚೀನಾ ಮತ್ತು ಭಾರತಕ್ಕೆ ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಪೂರೈಕೆಯಾಗುತ್ತಿದೆ. ‘ನಮ್ಮ ಇಂಧನ ಸಂಪನ್ಮೂಲಗಳಲ್ಲಿ ಹೆಚ್ಚಿನ ಪಾಲನ್ನು ನಮ್ಮೊಂದಿಗೆ ಸ್ನೇಹದಿಂದ ಇರುವ ದೇಶಗಳಿಗೆ ಕಳುಹಿಸುತ್ತಿದ್ದೇವೆ’ ಎಂದು ರಷ್ಯಾ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಅವರು ಹೇಳಿರುವುದಾಗಿ ರಷ್ಯಾದ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

‘ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು ಕಳೆದ ವರ್ಷ 22 ಪಟ್ಟು ಹೆಚ್ಚಾಗಿದೆ’ ಎಂದು ನೊವಾಕ್ ಹೇಳಿದ್ದಾರೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

1 hour ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

2 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

2 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

2 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

3 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

3 hours ago