BREAKING NEWS

ರಷ್ಯಾದಿಂದ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ

ಮಾಸ್ಕೊ: 2022ರಲ್ಲಿ ರಷ್ಯಾ ದೇಶವು ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು 22 ಪಟ್ಟು ಹೆಚ್ಚಳ ಕಂಡಿದೆ ಎಂದು ರಷ್ಯಾದ ಉಪ ಪ್ರಧಾನಿ ಮಂಗಳವಾರ ಹೇಳಿದ್ದಾರೆ.

ರಷ್ಯಾ–ಉಕ್ರೇನ್ ಸಂಘರ್ಷ ಆರಂಭವಾದ ನಂತರದಲ್ಲಿ ಐರೋಪ್ಯ ಒಕ್ಕೂಟದ ದೇಶಗಳು ರಷ್ಯಾ ಇಂಧನದ ಮೇಲಿನ ಅವಲಂಬನೆಯನ್ನು ತಗ್ಗಿಸಲು ಮುಂದಾದವು. ಆಗ ರಷ್ಯಾ, ಭಾರತ ಮತ್ತು ಚೀನಾಕ್ಕೆ ಕಚ್ಚಾ ತೈಲ ರಫ್ತು ಹೆಚ್ಚಿಸಲು ಆರಂಭಿಸಿತು.

ಚೀನಾ ಮತ್ತು ಭಾರತಕ್ಕೆ ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಪೂರೈಕೆಯಾಗುತ್ತಿದೆ. ‘ನಮ್ಮ ಇಂಧನ ಸಂಪನ್ಮೂಲಗಳಲ್ಲಿ ಹೆಚ್ಚಿನ ಪಾಲನ್ನು ನಮ್ಮೊಂದಿಗೆ ಸ್ನೇಹದಿಂದ ಇರುವ ದೇಶಗಳಿಗೆ ಕಳುಹಿಸುತ್ತಿದ್ದೇವೆ’ ಎಂದು ರಷ್ಯಾ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಅವರು ಹೇಳಿರುವುದಾಗಿ ರಷ್ಯಾದ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

‘ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು ಕಳೆದ ವರ್ಷ 22 ಪಟ್ಟು ಹೆಚ್ಚಾಗಿದೆ’ ಎಂದು ನೊವಾಕ್ ಹೇಳಿದ್ದಾರೆ.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

11 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

12 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

13 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

13 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

14 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago