ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ – ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ” ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದ ಟ್ಯಾಂಕರ್ ಅನ್ನು ತೆರವುಗೊಳಿಸಿ, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ರಾಸಾಯನಿಕ ಪದಾರ್ಥ ತುಂಬಿದ್ದ ಟ್ಯಾಂಕರ್ ಉರುಳಿದ ಕೂಡಲೇ ಬೆಂಕಿ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ಯಾಂಕರ್ನ ಸಮೀಪದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೂ ಬೆಂಕಿ ತಗುಲಿತ್ತು. ಟ್ಯಾಂಕರ್ನಲ್ಲಿ ಸಂಗ್ರಹಿಸಿದ್ದ ರಾಸಾಯನಿಕಗಳು ಅತ್ಯಂತ ಸೂಕ್ಷ್ಮ ಪದಾರ್ಥಗಳಾಗಿದ್ದು, ಬೆಂಕಿ ತಗುಲುವ ಸಾಧ್ಯತೆ ಹೆಚ್ಚಾಗಿತ್ತು ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…