BREAKING NEWS

ನಿರ್ಮಾಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಅಡ್ಡಂಡ ಮೇಲೆ ಒಕ್ಕಲಿಗ ಸಮುದಾಯದ ಕಿಡಿ : ರಂಗಾಯಣ ಮುತ್ತಿಗೆಗೆ ಯತ್ನ

ಮೈಸೂರು : ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆಯನ್ನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ರಂಗಾಯಣ ಮುತ್ತಿಗೆಗೆ ಯತ್ನಿಸಲಾಯ್ತು.
ನಿರ್ಮಲಾನಂದನಾಥ ಸ್ವಾಮೀಜಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ ಎಂದಿದ್ದ ಕಾರ್ಯಪ್ಪ ಹೇಳಿಕೆಗೆ ಒಕ್ಕಲಿಗ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,ಇಂದು ಒಕ್ಕಲಿಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಮೈಸೂರಿನ ರಂಗಾಯಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಮುನ್ನೆಚ್ಚರಿಕಾ ಕ್ರಮವಾಗಿ ಪೋಲೀಸರು ರಂಗಾಯಣದ ಎಲ್ಲಾ ಗೇಟ್‌ ಗಳನ್ನೂ ಬಂದ್‌ ಮಾಡಿದ್ದರು,ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಪೋಲಿಸರ ಜೊತೆ ಮಾತಿನ ಚಕಮಕಿ ನಡೆಸಿದರು.ಇನ್ನು ಅಡ್ಡಂಡ ಕಾರ್ಯಪ್ಪ ವಿರುದ್ಧ ವಿವಿಧ ಧಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಪೋಲಿಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದುಕೊಂಡರು.
ಕಾರ್ಯಪ್ಪ ಶ್ರೀಗಳ ಬಗ್ಗೆ ಹೇಳಿದ್ದೇನು ?


“ಅವರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ. ಬೇರೆ ಜಾತಿಗಳಿಗೆ ಅಲ್ಲ.ಒಕ್ಕಲಿಗ ಸಮುದಾಯ ರಕ್ಷಣೆ ಮಾಡುವುದು ಅವರ ಕೆಲಸ.ಹಾಗಂತ ಉರಿಗೌಡ,ನಂಜೇಗೌಡ ಕುರಿತು ಚರ್ಚೆ ನಡೆಯಲೇ ಬಾರದು ಅಂತಾ ಹೇಳಿದ್ದು ಸರಿಯಲ್ಲ” ಸ್ವಾಮೀಜಿಗಳು ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತರು.ಆಗಾಗ ಡಿಕೆಶಿ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ,ಅವರ ಸರ್ಕಾರ ಬೀಳದಂತೆ ನೋಡಿಕೊ ಎಂದು ಹೇಳಿದ್ದರು.ಅವರಿಗೆ ಕುಮಾರಸ್ವಾಮಿ,ಡಿಕೆಶಿ ಮಾತ್ರ ಒಕ್ಕಲಿಗ ನಾಯಕರು,ಸಿ.ಟಿ.ರವಿ,ಅಶ್ವತ್‌ ನಾರಾಯಣ್‌ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಬೇಕಿಲ್ಲ ಎಂದಿದ್ದರು.

lokesh

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

1 hour ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago