ಮೈಸೂರು : ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆಯನ್ನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ರಂಗಾಯಣ ಮುತ್ತಿಗೆಗೆ ಯತ್ನಿಸಲಾಯ್ತು.
ನಿರ್ಮಲಾನಂದನಾಥ ಸ್ವಾಮೀಜಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ ಎಂದಿದ್ದ ಕಾರ್ಯಪ್ಪ ಹೇಳಿಕೆಗೆ ಒಕ್ಕಲಿಗ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,ಇಂದು ಒಕ್ಕಲಿಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಮೈಸೂರಿನ ರಂಗಾಯಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಮುನ್ನೆಚ್ಚರಿಕಾ ಕ್ರಮವಾಗಿ ಪೋಲೀಸರು ರಂಗಾಯಣದ ಎಲ್ಲಾ ಗೇಟ್ ಗಳನ್ನೂ ಬಂದ್ ಮಾಡಿದ್ದರು,ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಪೋಲಿಸರ ಜೊತೆ ಮಾತಿನ ಚಕಮಕಿ ನಡೆಸಿದರು.ಇನ್ನು ಅಡ್ಡಂಡ ಕಾರ್ಯಪ್ಪ ವಿರುದ್ಧ ವಿವಿಧ ಧಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಪೋಲಿಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದುಕೊಂಡರು.
ಕಾರ್ಯಪ್ಪ ಶ್ರೀಗಳ ಬಗ್ಗೆ ಹೇಳಿದ್ದೇನು ?
“ಅವರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ. ಬೇರೆ ಜಾತಿಗಳಿಗೆ ಅಲ್ಲ.ಒಕ್ಕಲಿಗ ಸಮುದಾಯ ರಕ್ಷಣೆ ಮಾಡುವುದು ಅವರ ಕೆಲಸ.ಹಾಗಂತ ಉರಿಗೌಡ,ನಂಜೇಗೌಡ ಕುರಿತು ಚರ್ಚೆ ನಡೆಯಲೇ ಬಾರದು ಅಂತಾ ಹೇಳಿದ್ದು ಸರಿಯಲ್ಲ” ಸ್ವಾಮೀಜಿಗಳು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತರು.ಆಗಾಗ ಡಿಕೆಶಿ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ,ಅವರ ಸರ್ಕಾರ ಬೀಳದಂತೆ ನೋಡಿಕೊ ಎಂದು ಹೇಳಿದ್ದರು.ಅವರಿಗೆ ಕುಮಾರಸ್ವಾಮಿ,ಡಿಕೆಶಿ ಮಾತ್ರ ಒಕ್ಕಲಿಗ ನಾಯಕರು,ಸಿ.ಟಿ.ರವಿ,ಅಶ್ವತ್ ನಾರಾಯಣ್ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಬೇಕಿಲ್ಲ ಎಂದಿದ್ದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…