BREAKING NEWS

ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಓಲಾ-ಊಬರ್

ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.

ನಾಳೆ ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ ಬೆಂಗಳೂರಿನಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದರೆ, ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್​ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.

lokesh

Recent Posts

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…

4 mins ago

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…

30 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…

1 hour ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

2 hours ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

2 hours ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

2 hours ago