ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.
ನಾಳೆ ಬೆಂಗಳೂರು ಬಂದ್ಗೆ ಓಲಾ ಉಬರ್ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ ಬೆಂಗಳೂರಿನಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದರೆ, ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…