ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿವೆ. ಇದರ ಮಧ್ಯೆ ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ.
ನಾಳೆ ಬೆಂಗಳೂರು ಬಂದ್ಗೆ ಓಲಾ ಉಬರ್ ಬೆಂಬಲವಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್ಗೆ ಬೆಂಬಲ ವಾಪಸ್ ಪಡೆದಿದ್ದು, ನಾಳೆ ಬೆಂಗಳೂರಿನಲ್ಲಿ ಓಲಾ ಉಬರ್ ಸೇವೆಗಳು ಯಥಾಸ್ಥಿತಿಯಲ್ಲಿ ಇರುತ್ತವೆ. ಆದರೆ, ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿವೆ. ಆದರೆ, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಇದರಿಂದ ಬೆಂಗಳೂರು ಹಾಗೂ ಕರ್ನಾಟಕ ಬಂದ್ ಗೊಂದಲಮಯವಾಗಿದ್ದು, ಸಂಘಟನೆಗಳ ನಡುವೆಯೇ ಗೊಂದಲ ಸೃಷ್ಟಿಯಾಗಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…