ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ ವೀಕ್ಷಿಸಿದ್ದರು. ಯಶಸ್ವಿ ಲ್ಯಾಂಡಿಂಗ್ ಬಳಿಕ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.
ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಜೊತೆ ಮೋದಿ ದೂರವಾಣಿ ಮೂಲಕ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದರು. ಆದರೂ ಮೋದಿ ಇದೀಗ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಅತ್ಯುನ್ನತ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಗೌರವ ನೀಡಲಿದ್ದಾರೆ.
ಬುಧವಾರ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರಧಾನಿ ಮೋದಿ ಸಂಭ್ರಮ ಹಂಚಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ದಕ್ಷಿಣ ಆಫ್ರಿಕಾದಲ್ಲಿದ್ದೇನೆ. ಆದರೆ ನನ್ನ ಮನಸ್ಸು ಚಂದ್ರಯಾನ ಮೇಲಿತ್ತು. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…