BREAKING NEWS

ಜೂ.26 ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಐದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ

ನವದೆಹಲಿ: ಜೂನ್ 2 ರಂದು ಒಡಿಶಾದಲ್ಲಿ 289 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ನಂತರ ಭಾರತೀಯ ರೈಲ್ವೆ ಜೂನ್ 26 ರಿಂದ ಐದು ಮಾರ್ಗಗಳಲ್ಲಿ ಐದು ಹೊಸ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಐದು ಸೆಮಿ ಹೈಸ್ಪೀಡ್ ರೈಲುಗಳಿಗೆ ಚಾಲನೆ ನೀಡುವ ನಿರೀಕ್ಷೆ ಇದೆ.

ಐದು ವಂದೇ ಭಾರತ್ ರೈಲುಗಳು ಚಲಿಸುವ ಮಾರ್ಗಗಳೆಂದರೆ – ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಾಟ್ನಾ-ರಾಂಚಿ, ಭೋಪಾಲ್-ಇಂಧೋರ್ ಮತ್ತು ಭೋಪಾಲ್-ಜಬಲ್ಪುರ.

ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಉದ್ಘಾಟನೆಯನ್ನು ರದ್ದುಗೊಳಿಸಿತ್ತು. ಒಂದೇ ದಿನದಲ್ಲಿ ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲು.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

3 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

3 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

3 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

3 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

12 hours ago