BREAKING NEWS

ಸೆಪ್ಟೆಂಬರ್ 5‍ರಂದು ರಾಷ್ಟ್ರಪತಿಯಿಂದ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ ಪ್ರದಾನ

ನವದೆಹಲಿ : ಸೆಪ್ಟೆಂಬರ್ 5ರಂದು ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2023’ ವಿಜೇತ ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು hindustantimes.com ವರದಿ ಮಾಡಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಆಯೋಜಿಸಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಶಿಕ್ಷಣ ಸಚಿವಾಲಯವು ಮಾಹಿತಿ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಕರ್ನಾಟಕದ 6 ಮಂದಿ ಸೇರಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ವಿಭಾಗದಿಂದ ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಹೈಸ್ಕೂಲ್‌ನ ಶಿಕ್ಷಕ ನಾರಾಯಣ ಪರಮೇಶ್ವರ ಭಾಗವತ್‌, ಬಾಗಲಕೋಟೆಯ ಕೆಎಲ್‌ಇ ಸೊಸೈಟಿಯ ಜೂನಿಯರ್‌ ಕಾಲೇಜಿನ ಹೈಸ್ಕೂಲ್‌ ಶಿಕ್ಷಕಿ ಸಪ್ನಾ ಶ್ರೀ ಸೈಲ್‌ ಅನಿಗೋಲ್‌, ಉನ್ನತ ಶಿಕ್ಷಣ ವಿಭಾಗದಿಂದ ಧಾರವಾಡ ಐಐಟಿಯ ಡಾ. ಎಸ್‌ ಆರ್‌ ಮಹದೇವ ಪ್ರಸನ್ನ, ಬೆಂಗಳೂರಿನ ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಡಾ.ದಿನೇಶ್‌ ಬಾಬು ಜೆ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್‌ ಸ್ಕಿಲ್‌ ಟ್ರೈನಿಂಗ್‌ ಇನ್ಸ್ಟಿಟ್ಯೂಟ್‌ನ ಪೂಜಾ ಆರ್‌ ಸಿಂಗ್‌, ನ್ಯಾಷನಲ್‌ ಸ್ಕಿಲ್‌ ಟ್ರೈನಿಂಗ್‌ ಫಾರ್‌ ವುಮೆನ್‌ ನ ದಿವ್ಯಾ ಆಯ್ಕೆಯಾದವರು.

ಈ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಗೆ ದೇಶಾದ್ಯಂತ ಒಟ್ಟು 75 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ವಿಶಿಷ್ಟ ಕೊಡುಗೆ, ಬದ್ಧತೆ, ಅರ್ಪಣಾ ಮನೋಭಾವದಿಂದ ಶಿಕ್ಷಣದ ಗುಣಮಟ್ಟವನ್ನು ಮಾತ್ರವಲ್ಲದೆ, ವಿದ್ಯಾರ್ಥಿಗಳ ಜೀವನವನ್ನೂ ಸಂಪದ್ಭರಿತಗೊಳಿಸಿದ ಶಿಕ್ಷಕರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರತಿ ಪ್ರಶಸ್ತಿಯು ಅರ್ಹತಾ ಪ್ರಮಾಣ ಪತ್ರ, ರೂ. 50,000 ನಗದು ಹಾಗೂ ಬೆಳ್ಳಿ ಪದಕವನ್ನು ಒಳಗೊಂಡಿದೆ.

ಈ ವರ್ಷದಿಂದ ಉನ್ನತ ಶಿಕ್ಷಣ ಇಲಾಖೆ ಹಾಗೂ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಶಿಕ್ಷಕರಿಗೂ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಈ ಬಾರಿ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪೈಕಿ 50 ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರು, 13 ಮಂದಿ ಉನ್ನತ ಶಿಕ್ಷಣ ವಿಭಾಗದವರು ಹಾಗೂ 12 ಮಂದಿ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ವಿಭಾಗಕ್ಕೆ ಸೇರಿದವರು.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

2 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

2 hours ago