BREAKING NEWS

ಮದುವೆಯಾದ ರಾತ್ರಿಯೇ ನವದಂಪತಿ ಇಬ್ಬರೂ ಹೃದಯಾಘಾತಕ್ಕೆ ಬಲಿ

ಲಖನೌ : ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ ರಾತ್ರಿಯ ರಸಮಯ ಕ್ಷಣಗಳನ್ನು ಊಹಿಸುತ್ತಾ ನಾಚಿದ್ದರು. ಬೆಳಿಗ್ಗೆ ಅವರಿಬ್ಬರೂ ಎದ್ದು ಕೊಠಡಿಯಿಂದ ಹೊರಬಂದಾಗ ಕಿಚಾಯಿಸಿ ಮಜಾ ತೆಗೆದುಕೊಳ್ಳೋಣ ಎಂಬ ಕೀಟಲೆ ಉದ್ದೇಶದಿಂದ ಮನೆಯವರು ಕಾಯುತ್ತಿದ್ದರು. ಆದರೆ ಸಂಭ್ರಮದಲ್ಲಿದ್ದ ಆ ಎರಡೂ ಕುಟುಂಬಗಳಿಗೆ ಬೆಳ್ಳಂಬೆಳಿಗ್ಗೆಯೇ ಆಘಾತ ಎದುರಾಗಿತ್ತು.

ಮದುವೆಯ ರಾತ್ರಿ ಶೋಭನಕ್ಕೆಂದು ಕೊಠಡಿ ಒಳ ಸೇರಿದ ಈ ಹೊಸ ಜೋಡಿ ಜೀವಂತವಾಗಿ ಹೊರಗೆ ಬರಲೇ ಇಲ್ಲ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹೊಸದಾಗಿ ಮದುವೆಯಾಗಿದ್ದ ದಂಪತಿ ಮರು ದಿನ ಶವಗಳಾಗಿ ಪತ್ತೆಯಾಗಿದ್ದಾರೆ. ಅವರ ದಿಢೀರ್ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದವು. ಆದರೆ ಮದುಮಗ ಮತ್ತು ಮದುಮಗಳು ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.

22 ವರ್ಷದ ಪ್ರತಾಪ್ ಯಾದವ್ ಹಾಗೂ 20 ವರ್ಷದ ಪುಷ್ಪಾ ಅವರ ಮದುವೆ ಮೇ 30ರಂದು ನಡೆದಿತ್ತು. ಮದುವೆ ರಾತ್ರಿ ಅವರಿಬ್ಬರೂ ತಮ್ಮ ಕೊಠಡಿ ಸೇರಿಕೊಂಡಿದ್ದಾರೆ. ಆದರೆ ಮರುದಿನ ಅವರು ಕಾಣಿಸಿಕೊಂಡಿದ್ದು ಶವಗಳಾಗಿ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ತೆರಳಿದ್ದ ಪೊಲೀಸರು ಎರಡೂ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.

ಈ ಹಠಾತ್ ಸಾವಿನ ಸುತ್ತಲೂ ಅನುಮಾನ ವ್ಯಕ್ತವಾಗಿತ್ತು. ಶೋಭನಕ್ಕಾಗಿ ಕೊಠಡಿ ಸೇರಿದ ಇಬ್ಬರೂ ಸತ್ತಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದು ಕೊಲೆ ಇರಬಹುದು ಎಂಬ ಶಂಕೆ ಕೂಡ ವ್ಯಕ್ತವಾಗಿತ್ತು. ಆದರೆ ಅವರಿಬ್ಬರೂ ಒಳಗೇ ಇರುವಾಗ ಈ ರೀತಿ ಸಾಯಿಸುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಮೂಡಿದ್ದವು. ಅಲ್ಲದೆ ಸ್ಥಳದಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ನಡೆದಿರುವುದು, ಅವರು ಪ್ರತಿರೋಧ ಒಡ್ಡಿರುವುದು ಯಾವುದರ ಕುರುಹೂ ಇರಲಿಲ್ಲ. ಇದರಿಂದ ಊರಿನ ತುಂಬಾ ಅವರಿಬ್ಬರ ಸಾವಿನ ಕುರಿತು ಊಹಾಪೋಹಗಳು ಹರಿದಾಡಿದ್ದವು. ಈಗ ಮರಣೋತ್ತರ ಪರೀಕ್ಷೆ ವರದಿ ಕೈ ಸೇರಿದ್ದು, ಎಲ್ಲ ವದಂತಿಗಳಿಗೂ ಮಂಗಳ ಹಾಡಿದೆ. ಹೊಸದಾಗಿ ಮದುವೆಯಾಗಿದ್ದ ಗಂಡ ಮತ್ತು ಹೆಂಡತಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟಿರುವುದನ್ನು ಮರಣೋತ್ತರ ಪರೀಕ್ಷೆ ವರದಿ ತೋರಿಸಿದೆ ಎಂದು ಎಸ್‌ಪಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಆದರೆ ಇನ್ನೂ ಎಳೆಯ ವಯಸ್ಸಿನ ಇಬ್ಬರೂ ಒಟ್ಟಿಗೆ ಹೃದಯಾಘಾತಕ್ಕೆ ಒಳಗಾಗುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಮೂಡಿದೆ.

ನವದಂಪತಿ ಪ್ರತಾಪ್ ಮತ್ತು ಪುಷ್ಪಾ ಅವರನ್ನು ಪ್ರತಾಪ್‌ನ ಗ್ರಾಮದಲ್ಲಿ ಒಂದೇ ಚಿತೆಯಲ್ಲಿ ಒಟ್ಟಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ. ಈ ವೇಳೆ ಭಾರಿ ಸಂಖ್ಯೆಯಲ್ಲಿ ಜನರು ಹಾಜರಿದ್ದರು. ಮದುವೆಯ ಸಡಗರದಲ್ಲಿದ್ದ ಎರಡೂ ಕುಟುಂಬಗಳು ದಿನ ಬೆಳಗಾಗುವುದರೊಳಗೆ ಶೋಕದ ಮಡುವಿನಲ್ಲಿದ್ದವು. ಊರಿನ ಜನರು ಕೂಡ ಈ ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದರು.

lokesh

Recent Posts

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

11 mins ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

16 mins ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

21 mins ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 hours ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

2 hours ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago