ನವದೆಹಲಿ : ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ( ಮೇರಿ ಮಟಿ ಮೇರ ದೇಶ) ಅಭಿಯಾನಕ್ಕೆ ದೇಶಾದ್ಯಂತ ಚಾಲನೆ ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ.
ಮನ್ ಕಿ ಬಾರ್ ರೇಡಿಯೋ ಪ್ರಸಾರದ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆ.15ರಂದು ದೇಶಾದ್ಯಂತ ವೀರ ಯೋಧರಿಗೆ ಗೌರವ ಸಮರ್ಪಿಸಲು ನನ್ನ ತಾಯಿ, ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಭಾರತೀಯರೆಲ್ಲರೂ ಈ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಅಮೃತ್ ಮಹೋತ್ಸವ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಆಗಸ್ಟ್ 15ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಗುವುದು. ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.
ಈ ಅಭಿಯಾನಕ್ಕಾಗಿ ನಿವೃತ್ತ ಯೋಧರು ಹಾಗೂ ಲಕ್ಷಾಂತರ ದೇಶ ಪ್ರೇಮಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಅಳವಡಿಸಲಾಗುವುದು, ಜೊತೆಗೆ ಅಮೃತ ಕಳಶ ಯಾತ್ರೆಯನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
7500 ಚಿತಾಭಸ್ಮಗಳಲ್ಲಿ ಬರುವ ಮಣ್ಣು ಮತ್ತು ಸಸಿಗಳನ್ನು ಬೆಸೆಯುವ ಮೂಲಕ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ ವಾಟಿಕಾವನ್ನು ನಿರ್ಮಿಸಲಾಗುವುದು. ಈ ಅಮೃತ ವಾಟಿಕಾ ಕೂಡ ಏಕ್ ಭಾರತ್ ಶ್ರೇಷ್ಠ್ ಭಾರತ್ನ ಭವ್ಯ ಚಿಹ್ನೆ ಎಂದೂ ಪ್ರಧಾನಿ ಮೋದಿ ಹೇಳಿದರು.
ಇದಲ್ಲದೆ, ಈ ವರ್ಷ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಹಾನಿಗೊಳಗಾದ ಹಲವಾರು ವ್ಯಕ್ತಿಗಳ ಜೀವಗಳನ್ನು ಉಳಿಸಿದ್ದಕ್ಕಾಗಿ ಅವರು ಎನ್ಡಿಆರೆಫ್ ಸಿಬ್ಬಂದಿಯನ್ನು ಶ್ಲಾಘಿಸಿದರು.
ಯಮುನಾ ಸೇರಿದಂತೆ ಹಲವು ನದಿಗಳಲ್ಲಿ ಪ್ರವಾಹ ಉಂಟಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲೂ ಭೂಕುಸಿತ ಸಂಭವಿಸಿದೆ. ಈ ಮಧ್ಯೆ, ದೇಶದ ಪಶ್ಚಿಮ ಭಾಗದಲ್ಲಿ ಬಿಪರ್ಜಯ್ ಚಂಡಮಾರುತವು ಕೆಲ ಸಮಯದ ಹಿಂದೆ ಗುಜರಾತ್ನ ಪ್ರದೇಶಗಳಿಗೆ ಅಪ್ಪಳಿಸಿತು. ಆದರೆ ಈ ಎಲ್ಲಾ ವಿಪತ್ತುಗಳ ಮಧ್ಯೆ, ನಾವೆಲ್ಲರೂ ದೇಶವಾಸಿಗಳು ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ಮುನ್ನೆಲೆಗೆ ತಂದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದಲ್ಲದೆ, ಅಮೆರಿಕವು ನೂರಕ್ಕೂ ಹೆಚ್ಚು ಅಪರೂಪದ ಮತ್ತು ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇವುಗಳಲ್ಲಿ 11 ನೇ ಶತಮಾನದ ಸುಂದರವಾದ ಮರಳುಗಲ್ಲಿನ ಶಿಲ್ಪವನ್ನು ಸಹ ನೀವು ನೋಡುತ್ತೀರಿ. ಇದು ಅಪ್ಸರಾ ನೃತ್ಯದ ಕಲಾಕೃತಿಯಾಗಿದ್ದು, ಇದು ಮಧ್ಯಪ್ರದೇಶಕ್ಕೆ ಸೇರಿದೆ ಎಂದು ಹೇಳಿದರು.
ಹಿಂದಿನ ಸಾಂಸ್ಕೃತಿಕ ಪರಂಪರೆಯಾದ ಭೋಜ ಪತ್ರವನ್ನು ಸಂರಕ್ಷಿಸಿದ್ದಕ್ಕಾಗಿ ಉತ್ತರಾಖಂಡದ ಮಹಿಳೆಯರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.
ನನಗೆ ಉತ್ತರಾಖಂಡದ ಮಹಿಳೆಯರಿಂದ ಹಲವಾರು ಪತ್ರಗಳು ಬಂದಿವೆ. ಇವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಭೋಜಪತ್ರದಲ್ಲಿ ವಿಶಿಷ್ಟವಾದ ಕಲಾಕೃತಿಯನ್ನು ನನಗೆ ಉಡುಗೊರೆ ನೀಡಿದ್ದರು. ಪ್ರಾಚೀನ ಕಾಲದಿಂದಲೂ, ನಮ್ಮ ಧರ್ಮಗ್ರಂಥಗಳು ಮತ್ತು ಪುಸ್ತಕಗಳು ಈ ಭೋಜಪತ್ರಗಳ ಮೇಲೆ ಸಂರಕ್ಷಿಸಲಾಗಿದೆ. ಮಹಾಭಾರತವನ್ನು ಸಹ ಬರೆಯಲಾಗಿದೆ.
ಇಂದು ದೇವಭೂಮಿಯ ಈ ಮಹಿಳೆಯರು ಭೋಜಪತ್ರದಿಂದ ಬಹಳ ಸುಂದರವಾದ ಕಲಾಕೃತಿಗಳು ಮತ್ತು ಸ್ಮಾರಕಗಳನ್ನು ತಯಾರಿಸುತ್ತಿದ್ದಾರೆ. ದೇವಭೂಮಿಗೆ ಬಂದವರು ತಮ್ಮ ಭೇಟಿಯ ಸಮಯದಲ್ಲಿ ಸಾಧ್ಯವಾದಷ್ಟು ಸ್ಥಳೀಯ ಉತ್ಪನ್ನಗಳನ್ನು ಖರೀದಿಸಲು ನಾನು ಪ್ರವಾಸಿಗರಲ್ಲಿ ಮನವಿ ಮಾಡಿದ್ದೇನೆ. ಇದು ಅಲ್ಲಿ ಉತ್ತಮ ಪರಿಣಾಮ ಬೀರಿದೆ ಎಂದು ಪ್ರಧಾನಿ ಹೇಳಿದರು.
ಈ ಮಧ್ಯೆ, ಮನ್ ಕೀ ಬಾತ್ನ 103ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತವು ಡ್ರಗ್ಸ್ ವಿರುದ್ಧ ಭಾರಿ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಸುಮಾರು 1.5 ಲಕ್ಷ ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡ ನಂತರ, ಅದನ್ನು ನಾಶಪಡಿಸಲಾಗಿದೆ. ಭಾರತವು 10 ಲಕ್ಷ ಕೆಜಿ ಡ್ರಗ್ಸ್ ಅನ್ನು ನಾಶಪಡಿಸುವ ವಿಶಿಷ್ಟ ದಾಖಲೆಯನ್ನು ಸಹ ಸೃಷ್ಟಿಸಿದೆ ಎಂದರು.
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…