BREAKING NEWS

ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ ಅಭಿಯಾನಕ್ಕೆ ನಮೋ ಚಾಲನೆ

ನವದೆಹಲಿ : ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ( ಮೇರಿ ಮಟಿ ಮೇರ ದೇಶ) ಅಭಿಯಾನಕ್ಕೆ ದೇಶಾದ್ಯಂತ ಚಾಲನೆ ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ.

ಮನ್ ಕಿ ಬಾರ್ ರೇಡಿಯೋ ಪ್ರಸಾರದ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆ.15ರಂದು ದೇಶಾದ್ಯಂತ ವೀರ ಯೋಧರಿಗೆ ಗೌರವ ಸಮರ್ಪಿಸಲು ನನ್ನ ತಾಯಿ, ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಭಾರತೀಯರೆಲ್ಲರೂ ಈ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಅಮೃತ್ ಮಹೋತ್ಸವ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಆಗಸ್ಟ್ 15ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಗುವುದು. ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.

ಈ ಅಭಿಯಾನಕ್ಕಾಗಿ ನಿವೃತ್ತ ಯೋಧರು ಹಾಗೂ ಲಕ್ಷಾಂತರ ದೇಶ ಪ್ರೇಮಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಅಳವಡಿಸಲಾಗುವುದು, ಜೊತೆಗೆ ಅಮೃತ ಕಳಶ ಯಾತ್ರೆಯನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

7500 ಚಿತಾಭಸ್ಮಗಳಲ್ಲಿ ಬರುವ ಮಣ್ಣು ಮತ್ತು ಸಸಿಗಳನ್ನು ಬೆಸೆಯುವ ಮೂಲಕ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ ವಾಟಿಕಾವನ್ನು ನಿರ್ಮಿಸಲಾಗುವುದು. ಈ ಅಮೃತ ವಾಟಿಕಾ ಕೂಡ ಏಕ್ ಭಾರತ್ ಶ್ರೇಷ್ಠ್ ಭಾರತ್‍ನ ಭವ್ಯ ಚಿಹ್ನೆ ಎಂದೂ ಪ್ರಧಾನಿ ಮೋದಿ ಹೇಳಿದರು.

ಇದಲ್ಲದೆ, ಈ ವರ್ಷ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಹಾನಿಗೊಳಗಾದ ಹಲವಾರು ವ್ಯಕ್ತಿಗಳ ಜೀವಗಳನ್ನು ಉಳಿಸಿದ್ದಕ್ಕಾಗಿ ಅವರು ಎನ್‍ಡಿಆರೆಫ್ ಸಿಬ್ಬಂದಿಯನ್ನು ಶ್ಲಾಘಿಸಿದರು.

ಯಮುನಾ ಸೇರಿದಂತೆ ಹಲವು ನದಿಗಳಲ್ಲಿ ಪ್ರವಾಹ ಉಂಟಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲೂ ಭೂಕುಸಿತ ಸಂಭವಿಸಿದೆ. ಈ ಮಧ್ಯೆ, ದೇಶದ ಪಶ್ಚಿಮ ಭಾಗದಲ್ಲಿ ಬಿಪರ್ಜಯ್ ಚಂಡಮಾರುತವು ಕೆಲ ಸಮಯದ ಹಿಂದೆ ಗುಜರಾತ್‍ನ ಪ್ರದೇಶಗಳಿಗೆ ಅಪ್ಪಳಿಸಿತು. ಆದರೆ ಈ ಎಲ್ಲಾ ವಿಪತ್ತುಗಳ ಮಧ್ಯೆ, ನಾವೆಲ್ಲರೂ ದೇಶವಾಸಿಗಳು ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ಮುನ್ನೆಲೆಗೆ ತಂದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದಲ್ಲದೆ, ಅಮೆರಿಕವು ನೂರಕ್ಕೂ ಹೆಚ್ಚು ಅಪರೂಪದ ಮತ್ತು ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇವುಗಳಲ್ಲಿ 11 ನೇ ಶತಮಾನದ ಸುಂದರವಾದ ಮರಳುಗಲ್ಲಿನ ಶಿಲ್ಪವನ್ನು ಸಹ ನೀವು ನೋಡುತ್ತೀರಿ. ಇದು ಅಪ್ಸರಾ ನೃತ್ಯದ ಕಲಾಕೃತಿಯಾಗಿದ್ದು, ಇದು ಮಧ್ಯಪ್ರದೇಶಕ್ಕೆ ಸೇರಿದೆ ಎಂದು ಹೇಳಿದರು.

ಹಿಂದಿನ ಸಾಂಸ್ಕೃತಿಕ ಪರಂಪರೆಯಾದ ಭೋಜ ಪತ್ರವನ್ನು ಸಂರಕ್ಷಿಸಿದ್ದಕ್ಕಾಗಿ ಉತ್ತರಾಖಂಡದ ಮಹಿಳೆಯರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ನನಗೆ ಉತ್ತರಾಖಂಡದ ಮಹಿಳೆಯರಿಂದ ಹಲವಾರು ಪತ್ರಗಳು ಬಂದಿವೆ. ಇವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಭೋಜಪತ್ರದಲ್ಲಿ ವಿಶಿಷ್ಟವಾದ ಕಲಾಕೃತಿಯನ್ನು ನನಗೆ ಉಡುಗೊರೆ ನೀಡಿದ್ದರು. ಪ್ರಾಚೀನ ಕಾಲದಿಂದಲೂ, ನಮ್ಮ ಧರ್ಮಗ್ರಂಥಗಳು ಮತ್ತು ಪುಸ್ತಕಗಳು ಈ ಭೋಜಪತ್ರಗಳ ಮೇಲೆ ಸಂರಕ್ಷಿಸಲಾಗಿದೆ. ಮಹಾಭಾರತವನ್ನು ಸಹ ಬರೆಯಲಾಗಿದೆ.

ಇಂದು ದೇವಭೂಮಿಯ ಈ ಮಹಿಳೆಯರು ಭೋಜಪತ್ರದಿಂದ ಬಹಳ ಸುಂದರವಾದ ಕಲಾಕೃತಿಗಳು ಮತ್ತು ಸ್ಮಾರಕಗಳನ್ನು ತಯಾರಿಸುತ್ತಿದ್ದಾರೆ. ದೇವಭೂಮಿಗೆ ಬಂದವರು ತಮ್ಮ ಭೇಟಿಯ ಸಮಯದಲ್ಲಿ ಸಾಧ್ಯವಾದಷ್ಟು ಸ್ಥಳೀಯ ಉತ್ಪನ್ನಗಳನ್ನು ಖರೀದಿಸಲು ನಾನು ಪ್ರವಾಸಿಗರಲ್ಲಿ ಮನವಿ ಮಾಡಿದ್ದೇನೆ. ಇದು ಅಲ್ಲಿ ಉತ್ತಮ ಪರಿಣಾಮ ಬೀರಿದೆ ಎಂದು ಪ್ರಧಾನಿ ಹೇಳಿದರು.

ಈ ಮಧ್ಯೆ, ಮನ್ ಕೀ ಬಾತ್‍ನ 103ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತವು ಡ್ರಗ್ಸ್ ವಿರುದ್ಧ ಭಾರಿ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಸುಮಾರು 1.5 ಲಕ್ಷ ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡ ನಂತರ, ಅದನ್ನು ನಾಶಪಡಿಸಲಾಗಿದೆ. ಭಾರತವು 10 ಲಕ್ಷ ಕೆಜಿ ಡ್ರಗ್ಸ್ ಅನ್ನು ನಾಶಪಡಿಸುವ ವಿಶಿಷ್ಟ ದಾಖಲೆಯನ್ನು ಸಹ ಸೃಷ್ಟಿಸಿದೆ ಎಂದರು.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

5 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 hours ago