BREAKING NEWS

ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ ಅಭಿಯಾನಕ್ಕೆ ನಮೋ ಚಾಲನೆ

ನವದೆಹಲಿ : ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸ್ವಾತಂತ್ರ್ಯ ದಿನಾಚರಣೆಯಂದು ನನ್ನ ತಾಯಿ ನನ್ನ ದೇಶ( ಮೇರಿ ಮಟಿ ಮೇರ ದೇಶ) ಅಭಿಯಾನಕ್ಕೆ ದೇಶಾದ್ಯಂತ ಚಾಲನೆ ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಿಸಿದ್ದಾರೆ.

ಮನ್ ಕಿ ಬಾರ್ ರೇಡಿಯೋ ಪ್ರಸಾರದ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆ.15ರಂದು ದೇಶಾದ್ಯಂತ ವೀರ ಯೋಧರಿಗೆ ಗೌರವ ಸಮರ್ಪಿಸಲು ನನ್ನ ತಾಯಿ, ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಭಾರತೀಯರೆಲ್ಲರೂ ಈ ಅಭಿಯಾನದಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಅಮೃತ್ ಮಹೋತ್ಸವ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಆಗಸ್ಟ್ 15ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಗುವುದು. ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.

ಈ ಅಭಿಯಾನಕ್ಕಾಗಿ ನಿವೃತ್ತ ಯೋಧರು ಹಾಗೂ ಲಕ್ಷಾಂತರ ದೇಶ ಪ್ರೇಮಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಅಳವಡಿಸಲಾಗುವುದು, ಜೊತೆಗೆ ಅಮೃತ ಕಳಶ ಯಾತ್ರೆಯನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

7500 ಚಿತಾಭಸ್ಮಗಳಲ್ಲಿ ಬರುವ ಮಣ್ಣು ಮತ್ತು ಸಸಿಗಳನ್ನು ಬೆಸೆಯುವ ಮೂಲಕ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ ವಾಟಿಕಾವನ್ನು ನಿರ್ಮಿಸಲಾಗುವುದು. ಈ ಅಮೃತ ವಾಟಿಕಾ ಕೂಡ ಏಕ್ ಭಾರತ್ ಶ್ರೇಷ್ಠ್ ಭಾರತ್‍ನ ಭವ್ಯ ಚಿಹ್ನೆ ಎಂದೂ ಪ್ರಧಾನಿ ಮೋದಿ ಹೇಳಿದರು.

ಇದಲ್ಲದೆ, ಈ ವರ್ಷ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಹಾನಿಗೊಳಗಾದ ಹಲವಾರು ವ್ಯಕ್ತಿಗಳ ಜೀವಗಳನ್ನು ಉಳಿಸಿದ್ದಕ್ಕಾಗಿ ಅವರು ಎನ್‍ಡಿಆರೆಫ್ ಸಿಬ್ಬಂದಿಯನ್ನು ಶ್ಲಾಘಿಸಿದರು.

ಯಮುನಾ ಸೇರಿದಂತೆ ಹಲವು ನದಿಗಳಲ್ಲಿ ಪ್ರವಾಹ ಉಂಟಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲೂ ಭೂಕುಸಿತ ಸಂಭವಿಸಿದೆ. ಈ ಮಧ್ಯೆ, ದೇಶದ ಪಶ್ಚಿಮ ಭಾಗದಲ್ಲಿ ಬಿಪರ್ಜಯ್ ಚಂಡಮಾರುತವು ಕೆಲ ಸಮಯದ ಹಿಂದೆ ಗುಜರಾತ್‍ನ ಪ್ರದೇಶಗಳಿಗೆ ಅಪ್ಪಳಿಸಿತು. ಆದರೆ ಈ ಎಲ್ಲಾ ವಿಪತ್ತುಗಳ ಮಧ್ಯೆ, ನಾವೆಲ್ಲರೂ ದೇಶವಾಸಿಗಳು ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ಮುನ್ನೆಲೆಗೆ ತಂದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದಲ್ಲದೆ, ಅಮೆರಿಕವು ನೂರಕ್ಕೂ ಹೆಚ್ಚು ಅಪರೂಪದ ಮತ್ತು ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇವುಗಳಲ್ಲಿ 11 ನೇ ಶತಮಾನದ ಸುಂದರವಾದ ಮರಳುಗಲ್ಲಿನ ಶಿಲ್ಪವನ್ನು ಸಹ ನೀವು ನೋಡುತ್ತೀರಿ. ಇದು ಅಪ್ಸರಾ ನೃತ್ಯದ ಕಲಾಕೃತಿಯಾಗಿದ್ದು, ಇದು ಮಧ್ಯಪ್ರದೇಶಕ್ಕೆ ಸೇರಿದೆ ಎಂದು ಹೇಳಿದರು.

ಹಿಂದಿನ ಸಾಂಸ್ಕೃತಿಕ ಪರಂಪರೆಯಾದ ಭೋಜ ಪತ್ರವನ್ನು ಸಂರಕ್ಷಿಸಿದ್ದಕ್ಕಾಗಿ ಉತ್ತರಾಖಂಡದ ಮಹಿಳೆಯರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

ನನಗೆ ಉತ್ತರಾಖಂಡದ ಮಹಿಳೆಯರಿಂದ ಹಲವಾರು ಪತ್ರಗಳು ಬಂದಿವೆ. ಇವರು ಕಳೆದ ವರ್ಷ ಅಕ್ಟೋಬರ್ನಲ್ಲಿ ಭೋಜಪತ್ರದಲ್ಲಿ ವಿಶಿಷ್ಟವಾದ ಕಲಾಕೃತಿಯನ್ನು ನನಗೆ ಉಡುಗೊರೆ ನೀಡಿದ್ದರು. ಪ್ರಾಚೀನ ಕಾಲದಿಂದಲೂ, ನಮ್ಮ ಧರ್ಮಗ್ರಂಥಗಳು ಮತ್ತು ಪುಸ್ತಕಗಳು ಈ ಭೋಜಪತ್ರಗಳ ಮೇಲೆ ಸಂರಕ್ಷಿಸಲಾಗಿದೆ. ಮಹಾಭಾರತವನ್ನು ಸಹ ಬರೆಯಲಾಗಿದೆ.

ಇಂದು ದೇವಭೂಮಿಯ ಈ ಮಹಿಳೆಯರು ಭೋಜಪತ್ರದಿಂದ ಬಹಳ ಸುಂದರವಾದ ಕಲಾಕೃತಿಗಳು ಮತ್ತು ಸ್ಮಾರಕಗಳನ್ನು ತಯಾರಿಸುತ್ತಿದ್ದಾರೆ. ದೇವಭೂಮಿಗೆ ಬಂದವರು ತಮ್ಮ ಭೇಟಿಯ ಸಮಯದಲ್ಲಿ ಸಾಧ್ಯವಾದಷ್ಟು ಸ್ಥಳೀಯ ಉತ್ಪನ್ನಗಳನ್ನು ಖರೀದಿಸಲು ನಾನು ಪ್ರವಾಸಿಗರಲ್ಲಿ ಮನವಿ ಮಾಡಿದ್ದೇನೆ. ಇದು ಅಲ್ಲಿ ಉತ್ತಮ ಪರಿಣಾಮ ಬೀರಿದೆ ಎಂದು ಪ್ರಧಾನಿ ಹೇಳಿದರು.

ಈ ಮಧ್ಯೆ, ಮನ್ ಕೀ ಬಾತ್‍ನ 103ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತವು ಡ್ರಗ್ಸ್ ವಿರುದ್ಧ ಭಾರಿ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಸುಮಾರು 1.5 ಲಕ್ಷ ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡ ನಂತರ, ಅದನ್ನು ನಾಶಪಡಿಸಲಾಗಿದೆ. ಭಾರತವು 10 ಲಕ್ಷ ಕೆಜಿ ಡ್ರಗ್ಸ್ ಅನ್ನು ನಾಶಪಡಿಸುವ ವಿಶಿಷ್ಟ ದಾಖಲೆಯನ್ನು ಸಹ ಸೃಷ್ಟಿಸಿದೆ ಎಂದರು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago