BREAKING NEWS

ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ ‘ಸಾಫ್ಟ್‌ ಲ್ಯಾಂಡ್’ ಆದ ವಿಕ್ರಮ್‌ ಲ್ಯಾಂಡರ್‌ !

ನವದೆಹಲಿ : ಚಂದ್ರಯಾನ-3 ಮಿಷನ್‌ ಅಂಗವಾಗಿ ಆಗಸ್ಟ್‌ 23ರಂದು ಚಂದಿರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ನಂತರ ವಿಕ್ರಮ್ ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ “ಸಾಫ್ಟ್‌ ಲ್ಯಾಂಡ್” ಆಗಿದೆ ಎಂದು ಇಸ್ರೋ ಇಂದು ಹೇಳಿದೆ.

“ವಿಕ್ರಮ್‌ ಲ್ಯಾಂಡರ್‌ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಮೀರಿದೆ ಹಾಗೂ ಯಶಸ್ವಿಯಾಗಿ “ಹಾಪ್‌ ಪ್ರಯೋಗವನ್ನು” ಪೂರ್ಣಗೊಳಿಸಿದೆ,” ಎಂದು ಇಸ್ರೋ ಹೇಳಿದೆ.

“ಆದೇಶದ ಮೇರೆಗೆ ಅದರ ಇಂಜಿನ್‌ಗಳು ಆರಂಭಗೊಂಡು ಅದು 40 ಸೆಂ.ಮೀ ಮೇಲಕ್ಕೆ ಹೋಗಿ ನಿರೀಕ್ಷೆಯಂತೆ ಸುರಕ್ಷಿತವಾಗಿ 30-40 ಸೆಂ.ಮೀ ದೂರದಲ್ಲಿ ಲ್ಯಾಂಡ್‌ ಆಗಿದೆ,” ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಸಾಧನೆಯು ಭವಿಷ್ಯದ ಯೋಜನೆಗಳಿಗೆ ಮತ್ತು ಮಾನವ ಮಿಷನ್‌ಗಳಿಗೆ ಪ್ರೇರಣೆಯಾಗಿದೆ,” ಎಂದು ಇಸ್ರೋ ಹೇಳಿದೆ.

ಕಳೆದ ವಾರ ಚಂದ್ರಯಾನ-3 ಮಿಷನ್‌ನ ಪ್ರಜ್ಞಾನ ರೋವರ್‌ ಅನ್ನು”ಸ್ಲೀಪ್‌ ಮೋಡ್‌”ನಲ್ಲಿರಿಸಲಾಯಿತು ಆದರೆ ಅದರ ಬ್ಯಾಟರಿಗಳು ಚಾರ್ಜ್‌ ಆಗುತ್ತಿವೆ ಹಾಗೂ ರಿಸೀವರ್‌ ಆನ್‌ ಆಗಿದೆ ಎಂದು ಇಸ್ರೋ ಹೇಳಿದೆ.

andolanait

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

2 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

2 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

2 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

12 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

12 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

13 hours ago