BREAKING NEWS

ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ ‘ಸಾಫ್ಟ್‌ ಲ್ಯಾಂಡ್’ ಆದ ವಿಕ್ರಮ್‌ ಲ್ಯಾಂಡರ್‌ !

ನವದೆಹಲಿ : ಚಂದ್ರಯಾನ-3 ಮಿಷನ್‌ ಅಂಗವಾಗಿ ಆಗಸ್ಟ್‌ 23ರಂದು ಚಂದಿರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ನಂತರ ವಿಕ್ರಮ್ ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ “ಸಾಫ್ಟ್‌ ಲ್ಯಾಂಡ್” ಆಗಿದೆ ಎಂದು ಇಸ್ರೋ ಇಂದು ಹೇಳಿದೆ.

“ವಿಕ್ರಮ್‌ ಲ್ಯಾಂಡರ್‌ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಮೀರಿದೆ ಹಾಗೂ ಯಶಸ್ವಿಯಾಗಿ “ಹಾಪ್‌ ಪ್ರಯೋಗವನ್ನು” ಪೂರ್ಣಗೊಳಿಸಿದೆ,” ಎಂದು ಇಸ್ರೋ ಹೇಳಿದೆ.

“ಆದೇಶದ ಮೇರೆಗೆ ಅದರ ಇಂಜಿನ್‌ಗಳು ಆರಂಭಗೊಂಡು ಅದು 40 ಸೆಂ.ಮೀ ಮೇಲಕ್ಕೆ ಹೋಗಿ ನಿರೀಕ್ಷೆಯಂತೆ ಸುರಕ್ಷಿತವಾಗಿ 30-40 ಸೆಂ.ಮೀ ದೂರದಲ್ಲಿ ಲ್ಯಾಂಡ್‌ ಆಗಿದೆ,” ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಸಾಧನೆಯು ಭವಿಷ್ಯದ ಯೋಜನೆಗಳಿಗೆ ಮತ್ತು ಮಾನವ ಮಿಷನ್‌ಗಳಿಗೆ ಪ್ರೇರಣೆಯಾಗಿದೆ,” ಎಂದು ಇಸ್ರೋ ಹೇಳಿದೆ.

ಕಳೆದ ವಾರ ಚಂದ್ರಯಾನ-3 ಮಿಷನ್‌ನ ಪ್ರಜ್ಞಾನ ರೋವರ್‌ ಅನ್ನು”ಸ್ಲೀಪ್‌ ಮೋಡ್‌”ನಲ್ಲಿರಿಸಲಾಯಿತು ಆದರೆ ಅದರ ಬ್ಯಾಟರಿಗಳು ಚಾರ್ಜ್‌ ಆಗುತ್ತಿವೆ ಹಾಗೂ ರಿಸೀವರ್‌ ಆನ್‌ ಆಗಿದೆ ಎಂದು ಇಸ್ರೋ ಹೇಳಿದೆ.

andolanait

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

2 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

2 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

2 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

3 hours ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

14 hours ago