BREAKING NEWS

ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ ‘ಸಾಫ್ಟ್‌ ಲ್ಯಾಂಡ್’ ಆದ ವಿಕ್ರಮ್‌ ಲ್ಯಾಂಡರ್‌ !

ನವದೆಹಲಿ : ಚಂದ್ರಯಾನ-3 ಮಿಷನ್‌ ಅಂಗವಾಗಿ ಆಗಸ್ಟ್‌ 23ರಂದು ಚಂದಿರನ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್‌ ಯಶಸ್ವಿಯಾಗಿ ಕಾಲಿಟ್ಟ ಹಲವು ದಿನಗಳ ನಂತರ ವಿಕ್ರಮ್ ಮತ್ತೊಮ್ಮೆ ಚಂದ್ರನ ಮೇಲ್ಮೈಯಲ್ಲಿ “ಸಾಫ್ಟ್‌ ಲ್ಯಾಂಡ್” ಆಗಿದೆ ಎಂದು ಇಸ್ರೋ ಇಂದು ಹೇಳಿದೆ.

“ವಿಕ್ರಮ್‌ ಲ್ಯಾಂಡರ್‌ ಚಂದ್ರಯಾನ-3 ಮಿಷನ್‌ ಉದ್ದೇಶಗಳನ್ನು ಮೀರಿದೆ ಹಾಗೂ ಯಶಸ್ವಿಯಾಗಿ “ಹಾಪ್‌ ಪ್ರಯೋಗವನ್ನು” ಪೂರ್ಣಗೊಳಿಸಿದೆ,” ಎಂದು ಇಸ್ರೋ ಹೇಳಿದೆ.

“ಆದೇಶದ ಮೇರೆಗೆ ಅದರ ಇಂಜಿನ್‌ಗಳು ಆರಂಭಗೊಂಡು ಅದು 40 ಸೆಂ.ಮೀ ಮೇಲಕ್ಕೆ ಹೋಗಿ ನಿರೀಕ್ಷೆಯಂತೆ ಸುರಕ್ಷಿತವಾಗಿ 30-40 ಸೆಂ.ಮೀ ದೂರದಲ್ಲಿ ಲ್ಯಾಂಡ್‌ ಆಗಿದೆ,” ಎಂದು ಸಂಸ್ಥೆ ಮಾಹಿತಿ ನೀಡಿದೆ.

“ಈ ಸಾಧನೆಯು ಭವಿಷ್ಯದ ಯೋಜನೆಗಳಿಗೆ ಮತ್ತು ಮಾನವ ಮಿಷನ್‌ಗಳಿಗೆ ಪ್ರೇರಣೆಯಾಗಿದೆ,” ಎಂದು ಇಸ್ರೋ ಹೇಳಿದೆ.

ಕಳೆದ ವಾರ ಚಂದ್ರಯಾನ-3 ಮಿಷನ್‌ನ ಪ್ರಜ್ಞಾನ ರೋವರ್‌ ಅನ್ನು”ಸ್ಲೀಪ್‌ ಮೋಡ್‌”ನಲ್ಲಿರಿಸಲಾಯಿತು ಆದರೆ ಅದರ ಬ್ಯಾಟರಿಗಳು ಚಾರ್ಜ್‌ ಆಗುತ್ತಿವೆ ಹಾಗೂ ರಿಸೀವರ್‌ ಆನ್‌ ಆಗಿದೆ ಎಂದು ಇಸ್ರೋ ಹೇಳಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago