BREAKING NEWS

‘ಒಂದು ದೇಶ, ಒಂದು ಹಾಲು’ ಘೋಷಣೆಗೆ ಅವಕಾಶ ನೀಡಲ್ಲ: ಜೈರಾಮ್ ರಮೇಶ್

ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ.

ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು ನಿಯಂತ್ರಿಸುವ ‘ನಾಚಿಕೆಗೇಡಿನ ಕ್ರಮ’ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಹಕಾರಿ ಸಂಸ್ಥೆಗಳ ನಿಯಂತ್ರಣವನ್ನು ಕೇಂದ್ರೀಕರಿಸುವ ಬಿಜೆಪಿಯ ಪ್ರಯತ್ನಗಳನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಇರುವಾಗ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದ್ದು, ಕೆಎಂಎಫ್‌ ₹ 21,000 ಕೋಟಿ ವಹಿವಾಟು ನಡೆಸುತ್ತಿದ್ದು ನಂದಿನಿ ಬ್ರಾಂಡ್ ಅನ್ನು ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (ಅಮೂಲ್) ನೊಂದಿಗೆ ವಿಲೀನಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ಆದರೆ, ಈ ಆರೋಪವನ್ನು ಬಿಜೆಪಿ ಬಲವಾಗಿ ತಿರಸ್ಕರಿಸಿದೆ.

ಯಾವುದೇ ಕಾರಣಕ್ಕೂ ಬಿಜೆಪಿಯ ಒಂದು ದೇಶ ಒಂದು ಹಾಲು ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ರಮೇಶ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದಲ್ಲಿ ಹಾಗೂ ದೇಶದಾದ್ಯಂತ ರಾಜಕೀಯ ಚಟುವಟಿಕೆಗಳಲ್ಲಿ ಈ ನಡೆಗಳ ಹಿಂದಿನ ಕೆಟ್ಟ ಕಾರ್ಯಸೂಚಿ ಬಗ್ಗೆ ಕಾಂಗ್ರೆಸ್‌ ಜನರಿಗೆ ತಿಳಿಸುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಅವುಗಳನ್ನು ವಿರೋಧಿಸಲು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಹಕಾರಿ ಸಂಘಗಳನ್ನು ರಾಜ್ಯ ವಿಷಯವಾಗಿ ಸ್ಪಷ್ಟವಾಗಿ ಗುರುತಿಸುವ ಸಂವಿಧಾನವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಕೆಎಂಎಫ್ ಮೆಗಾ ಡೇರಿ ಉದ್ಘಾಟನೆ ವೇಳೆ ಅಮಿತ್ ಶಾ, ‘ಅಮೂಲ್‌ ಮತ್ತು ನಂದಿನಿ ನಡುವಿನ ಸಹಕಾರವು ಡೈರಿ ಕ್ಷೇತ್ರದಲ್ಲಿ ಅದ್ಭುತ ಮಾಡಬಹುದು’ ಎಂದು ಹೇಳಿದ್ದರು.

ಗುಜರಾತ್ ಮೂಲದ ಅಮೂಲ್ ಏ. 5 ರಂದು ಹಾಲು ಮತ್ತು ಮೊಸರು ಪೂರೈಸಲು ಕರ್ನಾಟಕ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಘೋಷಿಸಿತು.

andolanait

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

5 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

6 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

6 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

6 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

6 hours ago