BREAKING NEWS

‘ಒಂದು ದೇಶ, ಒಂದು ಹಾಲು’ ಘೋಷಣೆಗೆ ಅವಕಾಶ ನೀಡಲ್ಲ: ಜೈರಾಮ್ ರಮೇಶ್

ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ.

ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು ನಿಯಂತ್ರಿಸುವ ‘ನಾಚಿಕೆಗೇಡಿನ ಕ್ರಮ’ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಹಕಾರಿ ಸಂಸ್ಥೆಗಳ ನಿಯಂತ್ರಣವನ್ನು ಕೇಂದ್ರೀಕರಿಸುವ ಬಿಜೆಪಿಯ ಪ್ರಯತ್ನಗಳನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಇರುವಾಗ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದ್ದು, ಕೆಎಂಎಫ್‌ ₹ 21,000 ಕೋಟಿ ವಹಿವಾಟು ನಡೆಸುತ್ತಿದ್ದು ನಂದಿನಿ ಬ್ರಾಂಡ್ ಅನ್ನು ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ (ಅಮೂಲ್) ನೊಂದಿಗೆ ವಿಲೀನಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ಆದರೆ, ಈ ಆರೋಪವನ್ನು ಬಿಜೆಪಿ ಬಲವಾಗಿ ತಿರಸ್ಕರಿಸಿದೆ.

ಯಾವುದೇ ಕಾರಣಕ್ಕೂ ಬಿಜೆಪಿಯ ಒಂದು ದೇಶ ಒಂದು ಹಾಲು ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ರಮೇಶ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದಲ್ಲಿ ಹಾಗೂ ದೇಶದಾದ್ಯಂತ ರಾಜಕೀಯ ಚಟುವಟಿಕೆಗಳಲ್ಲಿ ಈ ನಡೆಗಳ ಹಿಂದಿನ ಕೆಟ್ಟ ಕಾರ್ಯಸೂಚಿ ಬಗ್ಗೆ ಕಾಂಗ್ರೆಸ್‌ ಜನರಿಗೆ ತಿಳಿಸುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಅವುಗಳನ್ನು ವಿರೋಧಿಸಲು ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಹಕಾರಿ ಸಂಘಗಳನ್ನು ರಾಜ್ಯ ವಿಷಯವಾಗಿ ಸ್ಪಷ್ಟವಾಗಿ ಗುರುತಿಸುವ ಸಂವಿಧಾನವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಕೆಎಂಎಫ್ ಮೆಗಾ ಡೇರಿ ಉದ್ಘಾಟನೆ ವೇಳೆ ಅಮಿತ್ ಶಾ, ‘ಅಮೂಲ್‌ ಮತ್ತು ನಂದಿನಿ ನಡುವಿನ ಸಹಕಾರವು ಡೈರಿ ಕ್ಷೇತ್ರದಲ್ಲಿ ಅದ್ಭುತ ಮಾಡಬಹುದು’ ಎಂದು ಹೇಳಿದ್ದರು.

ಗುಜರಾತ್ ಮೂಲದ ಅಮೂಲ್ ಏ. 5 ರಂದು ಹಾಲು ಮತ್ತು ಮೊಸರು ಪೂರೈಸಲು ಕರ್ನಾಟಕ ಮಾರುಕಟ್ಟೆಗೆ ಪ್ರವೇಶಿಸುವುದಾಗಿ ಘೋಷಿಸಿತು.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

6 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

6 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 hours ago