BREAKING NEWS

ಒಂದು ರಾಷ್ಟ್ರ-ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ

ನವದೆಹಲಿ : ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್‌.ಕೆ ಸಿಂಗ್ ಮತ್ತಿತರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಯು ತಕ್ಷಣವೇ ಕಾರ್ಯ ನಿರ್ವಹಣೆಯನ್ನು ಪ್ರಾರಂಭಿಸಲಿದ್ದು, ಶೀಘ್ರವಾಗಿ ಶಿಫಾರಸು ಮಾಡಲಿದೆ. ಮಾಜಿ ಲೋಕಸಭಾ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಕೇಂದ್ರ ಜಾಗೃತ ಆಯೋಗದ ಮಾಜಿ ಮುಖ್ಯಸ್ಥ ಸಂಜಯ್ ಕೊಠಾರಿ ಸಹ ಸದಸ್ಯರಾಗಿದ್ದಾರೆ. ಸಮಿತಿಯ ಸಭೆಗಳಲ್ಲಿ ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾಗವಹಿಸಲಿದ್ದು, ಕಾನೂನು ವ್ಯವಹಾರಗಳ ಕಾರ್ಯದರ್ಶಿ ನಿತೇನ್ ಚಂದ್ರ ಸಮಿತಿಯ ಕಾರ್ಯದರ್ಶಿಯಾಗಿರುತ್ತಾರೆ.

ಸಮಿತಿಯು ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶಕ್ಕಾಗಿ ಸಂವಿಧಾನ ತಿದ್ದುಪಡಿ ಸೇರಿದಂತೆ ಮತ್ತಿತರ ಯಾವುದೇ  ಅಗತ್ಯ ಕಾನೂನುಗಳು ಮತ್ತು ನಿಯಮಗಳನ್ನು ಪರಿಶೀಲಿಸಿ, ಶಿಫಾರಸು ಮಾಡುತ್ತದೆ. ಅಲ್ಲದೇ, ಸಂವಿಧಾನದ ತಿದ್ದುಪಡಿಗಳಿಗೆ ರಾಜ್ಯಗಳ ಅನುಮೋದನೆಯ ಅಗತ್ಯವಿದ್ದಲ್ಲಿ ಅದನ್ನು ಕೂಡಾ ಪರಿಶೀಲಿಸಿ, ಶಿಫಾರಸು ಮಾಡುತ್ತದೆ.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago