‘ನವದೆಹಲಿ : “ಒಂದು ರಾಷ್ಟ್ರ, ಒಂದು ಚುನಾವಣೆ” ಕಲ್ಪನೆಯು ಭಾರತೀಯ ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವಿವಾರ ಆರೋಪಿಸಿದ್ದಾರೆ.
“INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ಎಂದು ರಾಹುಲ್ ಗಾಂಧಿ ಈ ಕುರಿತು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ,
ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ ನಂತರ ಕಾಂಗ್ರೆಸ್ ಸಂಸದರು ಟ್ವೀಟ್ ಮಾಡಿದ್ದಾರೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರಕಾರ ರಚಿಸಿರುವ ಸಮಿತಿಯ ಭಾಗವಾಗುವ ಆಹ್ವಾನವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ನಿರಾಕರಿಸಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖರ್ಗೆ ಬದಲಿಗೆ ಪ್ರತಿಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಝಾದ್ ಅವರನ್ನು ಸರಕಾರ ಸಮಿತಿಗೆ ಸೇರಿಸಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…