BREAKING NEWS

ಚಂದ್ರಯಾನ-3ರ ಉಡಾವಣಾ ಪ್ಯಾಡ್‌ ನಿರ್ಮಿಸಿದ್ದ ಇಂಜಿನಿಯರ್‌ಗಳಿಗೆ ಒಂದು ವರ್ಷದ ವೇತನ ಬಾಕಿ: ವರದಿ

ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್‌ಗಳಿಗೆ ಕಳೆದ ಒಂದು ವರ್ಷದಿಂದ ವೇತನವನ್ನೇ ಪಾವತಿಸಿಲ್ಲ ಎಂದು ವರದಿಯಾಗಿದೆ.

ರಾಂಚಿಯ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್‌ಗಳಿಗೆ ಕಳೆದ 17 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಐಎಎನ್‌ಎಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸಂಬಳ ಪಾವತಿಯಾಗದ ಸಮಸ್ಯೆಯ ಹೊರತಾಗಿಯೂ ನಿಗದಿತ ಚಂದ್ರಯಾನ-3 ಉಡಾವಣೆಯ ದಿನಾಂಕಕ್ಕೂ ಮುಂಚಿತವಾಗಿಯೇ ಡಿಸೆಂಬರ್, 2022ರಲ್ಲಿ ಈ ಸಂಸ್ಥೆಯು ಸಂಚಾರಿ ಉಡಾವಣಾ ವೇದಿಕೆ ಹಾಗೂ ಇನ್ನಿತರ ಅತ್ಯಗತ್ಯ ಮತ್ತು ಸಂಕೀರ್ಣ ಸಾಧನಗಳನ್ನು ಪೂರೈಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ಭಾರಿ ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಾಂಚಿಯ ಧುವ್ರಾದಲ್ಲಿದೆ. ಕಳೆದ ಒಂದು ವರ್ಷದಿಂದ ಈ ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಹಲವಾರು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಈ ವರ್ಷದ ಮೇ ತಿಂಗಳಲ್ಲಿ ಫ್ರಂಟ್‌ ಲೈನ್‌ ಪತ್ರಿಕೆಯು, ಈ ಸಂಸ್ಥೆಯ 2,700 ನೌಕರರು ಹಾಗೂ 450 ಅಧಿಕಾರಿಗಳಿಗೆ ಕಳೆದ 14 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವರದಿ ಮಾಡಿತ್ತು.

ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಐಎಎನ್‌ಎಸ್‌ ಸುದ್ದಿ ಸಂಸ್ಥೆಯು ಈ ಸಂಸ್ಥೆಯ ಅಧಿಕಾರಿಗಳು ವರ್ಷಪೂರ ವೇತನ ಸ್ವೀಕರಿಸಿಲ್ಲ ಹಾಗೂ ನೌಕರರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವರದಿ ಮಾಡಿತ್ತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ರಕ್ಷಣಾ ಸಚಿವಾಲಯ, ರೈಲ್ವೆ, ಕೋಲ್ ಇಂಡಿಯಾ ಹಾಗೂ ಉಕ್ಕು ವಲಯಗಳಿಂದ ರೂ. 1,500 ಮೌಲ್ಯದ ಕಾರ್ಯಾದೇಶವಿದ್ದರೂ, ನಿಧಿಯ ಕೊರತೆಯಿಂದಾಗಿ ಈ ಕಾರ್ಯಾದೇಶದ ಶೇ. 80ರಷ್ಟು ಕೆಲಸಗಳು ಇನ್ನೂ ಬಾಕಿ ಉಳಿದಿವೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ಚಂದ್ರಯಾನ-3ರ ಯಶಸ್ವಿ ಉಡಾವಣೆಯನ್ನು ಸಂಭ್ರಮಿಸಿದ ತಂತ್ರಜ್ಞರ ಪೈಕಿ ಒಬ್ಬರಾಗಿದ್ದ ಸುಭಾಶ್‌ ಚಂದ್ರ, “ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್‌ನ ಸಿಬ್ಬಂದಿಗಳು ತಮ್ಮ ತಲೆಯನ್ನು ಮತ್ತೆ ಹೆಮ್ಮೆಯಿಂದ ಮೇಲೆತ್ತಿದ್ದಾರೆ. ದೇಶದ ಈ ಮಹತ್ವದ ಯೋಜನೆಯಲ್ಲಿ ನಾವೂ ಪಾಲುದಾರರಾಗಿರುವುದಕ್ಕೆ ನಮಗೆ ಖುಶಿಯಾಗುತ್ತಿದೆ” ಎಂದು ಹೇಳಿದ್ದಾರೆ.

ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ತನಗೆ ರೂ. 1,000 ಕೋಟಿ ಉತ್ಪಾದನಾ ಬಂಡವಾಳ ಒದಗಿಸುವಂತೆ ಭಾರಿ ಕೈಗಾರಿಕೆಗಳ ಸಚಿವಾಲಯಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಕೇಂದ್ರ ಸರ್ಕಾರ ಯಾವುದೇ ನೆರವನ್ನು ಒದಗಿಸಲು ಸಾಧ್ಯವಿಲ್ಲ ಎಂದು ಸಚಿವಾಲಯವು ಪ್ರತ್ಯುತ್ತರ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್‌ಎಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದು ಮಾತ್ರವಲ್ಲದೆ, ಕಳೆದ ಎರಡೂವರೆ ವರ್ಷಗಳಲ್ಲಿ ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಖಾಯಂ ನೇಮಕಾತಿಯನ್ನೇ ಮಾಡಿಲ್ಲ. ಚಂದ್ರಯಾನ-3 ಯೋಜನೆಯ ನಿರ್ಮಾಣ ವೆಚ್ಚವು ಸುಮಾರು ರೂ. 600 ಕೋಟಿ ಆಗಿದೆ.

andolanait

Recent Posts

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

20 mins ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

25 mins ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

2 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

2 hours ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

3 hours ago