ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್ಗಳಿಗೆ ಕಳೆದ ಒಂದು ವರ್ಷದಿಂದ ವೇತನವನ್ನೇ ಪಾವತಿಸಿಲ್ಲ ಎಂದು ವರದಿಯಾಗಿದೆ.
ರಾಂಚಿಯ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್ಗಳಿಗೆ ಕಳೆದ 17 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸಂಬಳ ಪಾವತಿಯಾಗದ ಸಮಸ್ಯೆಯ ಹೊರತಾಗಿಯೂ ನಿಗದಿತ ಚಂದ್ರಯಾನ-3 ಉಡಾವಣೆಯ ದಿನಾಂಕಕ್ಕೂ ಮುಂಚಿತವಾಗಿಯೇ ಡಿಸೆಂಬರ್, 2022ರಲ್ಲಿ ಈ ಸಂಸ್ಥೆಯು ಸಂಚಾರಿ ಉಡಾವಣಾ ವೇದಿಕೆ ಹಾಗೂ ಇನ್ನಿತರ ಅತ್ಯಗತ್ಯ ಮತ್ತು ಸಂಕೀರ್ಣ ಸಾಧನಗಳನ್ನು ಪೂರೈಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.
ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ಭಾರಿ ಕೈಗಾರಿಕಾ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಾಂಚಿಯ ಧುವ್ರಾದಲ್ಲಿದೆ. ಕಳೆದ ಒಂದು ವರ್ಷದಿಂದ ಈ ಸಂಸ್ಥೆಯ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಹಲವಾರು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಈ ವರ್ಷದ ಮೇ ತಿಂಗಳಲ್ಲಿ ಫ್ರಂಟ್ ಲೈನ್ ಪತ್ರಿಕೆಯು, ಈ ಸಂಸ್ಥೆಯ 2,700 ನೌಕರರು ಹಾಗೂ 450 ಅಧಿಕಾರಿಗಳಿಗೆ ಕಳೆದ 14 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವರದಿ ಮಾಡಿತ್ತು.
ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಐಎಎನ್ಎಸ್ ಸುದ್ದಿ ಸಂಸ್ಥೆಯು ಈ ಸಂಸ್ಥೆಯ ಅಧಿಕಾರಿಗಳು ವರ್ಷಪೂರ ವೇತನ ಸ್ವೀಕರಿಸಿಲ್ಲ ಹಾಗೂ ನೌಕರರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವರದಿ ಮಾಡಿತ್ತು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ರಕ್ಷಣಾ ಸಚಿವಾಲಯ, ರೈಲ್ವೆ, ಕೋಲ್ ಇಂಡಿಯಾ ಹಾಗೂ ಉಕ್ಕು ವಲಯಗಳಿಂದ ರೂ. 1,500 ಮೌಲ್ಯದ ಕಾರ್ಯಾದೇಶವಿದ್ದರೂ, ನಿಧಿಯ ಕೊರತೆಯಿಂದಾಗಿ ಈ ಕಾರ್ಯಾದೇಶದ ಶೇ. 80ರಷ್ಟು ಕೆಲಸಗಳು ಇನ್ನೂ ಬಾಕಿ ಉಳಿದಿವೆ ಎಂದು ವರದಿಯಲ್ಲಿ ಹೇಳಲಾಗಿತ್ತು.
ಚಂದ್ರಯಾನ-3ರ ಯಶಸ್ವಿ ಉಡಾವಣೆಯನ್ನು ಸಂಭ್ರಮಿಸಿದ ತಂತ್ರಜ್ಞರ ಪೈಕಿ ಒಬ್ಬರಾಗಿದ್ದ ಸುಭಾಶ್ ಚಂದ್ರ, “ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ನ ಸಿಬ್ಬಂದಿಗಳು ತಮ್ಮ ತಲೆಯನ್ನು ಮತ್ತೆ ಹೆಮ್ಮೆಯಿಂದ ಮೇಲೆತ್ತಿದ್ದಾರೆ. ದೇಶದ ಈ ಮಹತ್ವದ ಯೋಜನೆಯಲ್ಲಿ ನಾವೂ ಪಾಲುದಾರರಾಗಿರುವುದಕ್ಕೆ ನಮಗೆ ಖುಶಿಯಾಗುತ್ತಿದೆ” ಎಂದು ಹೇಳಿದ್ದಾರೆ.
ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ತನಗೆ ರೂ. 1,000 ಕೋಟಿ ಉತ್ಪಾದನಾ ಬಂಡವಾಳ ಒದಗಿಸುವಂತೆ ಭಾರಿ ಕೈಗಾರಿಕೆಗಳ ಸಚಿವಾಲಯಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಕೇಂದ್ರ ಸರ್ಕಾರ ಯಾವುದೇ ನೆರವನ್ನು ಒದಗಿಸಲು ಸಾಧ್ಯವಿಲ್ಲ ಎಂದು ಸಚಿವಾಲಯವು ಪ್ರತ್ಯುತ್ತರ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದು ಮಾತ್ರವಲ್ಲದೆ, ಕಳೆದ ಎರಡೂವರೆ ವರ್ಷಗಳಲ್ಲಿ ಹೆವಿ ಎಂಜಿನಿಯರಿಂಗ್ ಕಾರ್ಪೊರೇಷನ್ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಖಾಯಂ ನೇಮಕಾತಿಯನ್ನೇ ಮಾಡಿಲ್ಲ. ಚಂದ್ರಯಾನ-3 ಯೋಜನೆಯ ನಿರ್ಮಾಣ ವೆಚ್ಚವು ಸುಮಾರು ರೂ. 600 ಕೋಟಿ ಆಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…