ಬೆಂಗಳೂರು: ಏಕಪಾತ್ರಾಭಿನಯದ ಬಿಜೆಪಿಗರು ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಜಿ ಸಚಿವ ಮಾಧುಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವರಾದ ಮಾಧುಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಅವರನ್ನು ಗುರಿ ಮಾಡಿಕೊಂಡು ಟ್ವಿಟ್ಟರ್ ಮೂಲಕ ಮಾಡಿದ್ದ ಆಪಾದನೆಗಳಿಗೆ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ಪಕ್ಷದ ಏಕಪಾತ್ರಾಭಿನಯದ ವೇಷಗಳನ್ನು ತೆರೆದಿಟ್ಟಿದ್ದಾರೆ.
ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ, ನಾಡಿನ ಜನರ ಪರವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದಿದ್ದಾರೆ.
ಬಿಜೆಪಿಗರಿಗೆ ಕರ್ತವ್ಯದ ಬಗ್ಗೆ ಅಜ್ಞಾನವಿದ್ದರೆ ನಾನು ಹೊಣೆಗಾರನಲ್ಲ! ಬಿಜೆಪಿಗೆ ಕರ್ತವ್ಯದ ಅರಿವು ಇಲ್ಲದಿದ್ದರಿಂದಲೇ ಹೀನಾಯ ಸೋಲಿಗೆ ಗುರಿಯಾಗಿದ್ದು ಎಂದು ಟೀಕಿಸಿದ್ದಾರೆ.
ಬಿಜೆಪಿ ಆಡಳಿತದ ಇಬ್ಬರು ಮುಖ್ಯಮಂತ್ರಿಗಳ ಅವಧಿಯಲ್ಲಿ ಯಾರು ಶಾಡೋ ಸಿಎಂ ಆಗಿದ್ದರು, ಯಾರು ಸೂಪರ್ ಸಿಎಂ ಆಗಿದ್ದರು ಎನ್ನುವುದು ಜಗತ್ತಿಗೆ ತಿಳಿದ ವಿಚಾರ, ಬಿಜೆಪಿಗೆ ತಿಳಿದಿಲ್ಲವೆಂದರೆ ಯತ್ನಾಳರ ಹಾಗೂ ರೇಣುಕಾಚಾರ್ಯರ ಮಾತುಗಳನ್ನು ರಿವೈಂಡ್ ಮಾಡಿ ಕೇಳಿಸಿಕೊಳ್ಳಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಸೋತು ವಿರೋಧ ಪಕ್ಷದಲ್ಲಿ ಕೂತಿದ್ದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುವ ಕನಿಷ್ಠ ಹೊಣೆಗಾರಿಕೆ ಪ್ರದರ್ಶಿಸಲು ಸಾಧ್ಯವಾಗಿಲ್ಲ ಬಿಜೆಪಿಗೆ. ಅಧಿವೇಶನ ಶುರುವಾಗಿ, ರಾಜ್ಯಪಾಲರ ಬಾಷಣವಾಗಿ, ಬಜೆಟ್ ಮಂಡನೆಯಾಗಿ, ಬಜೆಟ್ ಮೇಲಿನ ಚರ್ಚೆಯೂ ಆಯ್ತು, ಆದರೆ ಒಬ್ಬ ವಿರೋಧ ಪಕ್ಷದ ನಾಯಕ ಸಿಗದಿರುವುದು ಬಿಜೆಪಿಯ ರಾಜಕೀಯ ಹಾಗೂ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ವ್ಯಂಗ್ಯವಾಡಿದ್ದಾರೆ.
ಹೈಕಮಾಂಡ್ ನಾಯಕರಿಂದ ತಿರಸ್ಕಾರಕ್ಕೊಳಪಟ್ಟ ಬಿಜೆಪಿ, ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಬೊಗಸೆಯಷ್ಟಾದರೂ ಗೌರವವನ್ನು ಪಡೆದು ನಂತರ ನನ್ನ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…