ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧಪೀಡಿತ ದೇಶದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ವಿಶೇಷ ಚಾರ್ಟರ್ ವಿಮಾನಗಳು ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ದೇಶದಲ್ಲಿ ಇಸ್ರೇಲ್ ಹಾಗೂ ಹಮಾಸ್ ಉಗ್ರರ ಕದನ ಮುಂದುವರಿದಿದೆ. ಹಮಾಸ್ ಪರ ಸಿರಿಯಾ, ಇರಾನ್, ಲೆಬನಾನ್ನಂತಹ ದೇಶಗಳು ದಾಳಿಗೆ ಮುಂದಾಗಿದ್ದರೆ, ಅಮೆರಿಕ, ಬ್ರಿಟನ್, ಫ್ರಾನ್ಸ್ ಹಾಗೂ ಇತರೆ ದೇಶಗಳು ಇಸ್ರೇಲ್ ಬೆನ್ನಿಗೆ ನಿಂತಿವೆ.
ಭಾರತಕ್ಕೆ ಮರಳಲು ಬಯಸಿರುವ ನಮ್ಮ ನಾಗರಿಕರಿಗೆ ಸೌಲಭ್ಯ ಕಲ್ಪಿಸಲು ಆಪರೇಷನ್ ಅಜಯ್ ಆರಂಭಿಸಲಾಗಿದೆ. ವಿಶೇಷ ಚಾರ್ಟರ್ ಫ್ಲೈಟ್ಗಳು ಮತ್ತು ಇತರೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ” ಎಂದು ಜೈಶಂಕರ್ ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ವಿದೇಶದಲ್ಲಿ ನಮ್ಮ ಜನರ ಸುರಕ್ಷತೆ ಹಾಗೂ ಯೋಗ- ಕ್ಷೇಮಕ್ಕಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ದಿಲ್ಲಿಯಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ, ಟೆಲ್ ಅವಿವ್ ಮತ್ತು ರಾಮಲ್ಲಾಹ್ನಲ್ಲಿ ಪ್ರತ್ಯೇಕ ತುರ್ತು ಸಹಾಯವಾಣಿಗಳನ್ನು ತೆರೆದಿದೆ. ಸಹಾಯದ ಅಗತ್ಯ ಇರುವ ಭಾರತೀಯರಿಗೆ ಅಗತ್ಯ ಮಾಹಿತಿ ಮತ್ತು ನೆರವು ಒದಗಿಸುವುದು ಹಾಗೂ ಪರಿಸ್ಥಿತಿಯ ಅವಲೋಕನ ಮಾಡುವುದು ಇದರ ಉದ್ದೇಶವಾಗಿದೆ. ಇಸ್ರೇಲ್ನಲ್ಲಿ ಸುಮಾರು 20 ಸಾವಿರ ಭಾರತೀಯರು ಇದ್ದಾರೆ ಎಂದು ವರದಿಯಾಗಿದೆ.
ಇಸ್ರೇಲ್ನಲ್ಲಿ ಕೇರಳದ ಸುಮಾರು 7 ಸಾವಿರ ಮಂದಿ ಸಿಲುಕಿದ್ದು, ಅವರಿಗೆ ಸಹಾಯ ಮಾಡುವಂತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಮಧ್ಯಪ್ರವೇಶ ಮಾಡುವಂತೆ ಸಿಎಂ ಪಿಣರಾಯಿ ವಿಜಯನ್ ಅವರು ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು.
ತಮಿಳುನಾಡು ಸರ್ಕಾರ ಕೂಡ ಇಸ್ರೇಲ್ನಲ್ಲಿ ರಾಜ್ಯ ಸುಮಾರು 84 ಮಂದಿ ಇರುವುದಾಗಿ ತಿಳಿಸಿತ್ತು. ಶಿಕ್ಷಣ, ಉದ್ಯಮ ಅಥವಾ ಪ್ರವಾಸಕ್ಕೆಂದು ತೆರಳಿದವರು ಯುದ್ಧದ ನಡುವೆ ಸಿಲುಕಿಕೊಂಡಿದ್ದಾರೆ.
ಹಮಾಸ್ ಮತ್ತು ಇಸ್ರೇಲ್ ನಡುವಿನ ಸಮರ ಗುರುವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ಪಡೆಗಳು ಪರಸ್ಪರ ತೀವ್ರ ಸಂಘರ್ಷಕ್ಕೆ ಇಳಿದಿವೆ. ಲೆಬನಾನ್ನ ರಾಜಕೀಯ ಪಕ್ಷ ಹಾಗೂ ಉಗ್ರ ಸಂಘಟನೆ ಹೆಜ್ಬೊಲ್ಲಾ, ಇಸ್ರೇಲ್ ಕಡೆ ಕ್ಷಿಪಣಿಗಳನ್ನು ಉಡಾಯಿಸಿರುವುದಾಗಿ ಹೇಳಿದೆ. ಸಿರಿಯಾ ಕೂಡ ಇಸ್ರೇಲ್ ಭೂಭಾಗದ ಮೇಲೆ ಶೆಲ್ ದಾಳಿ ನಡೆಸಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…