BREAKING NEWS

ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಆಪರೇಷನ್ ಅಜಯ್ ಶುರು

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧಪೀಡಿತ ದೇಶದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ವಿಶೇಷ ಚಾರ್ಟರ್ ವಿಮಾನಗಳು ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ದೇಶದಲ್ಲಿ ಇಸ್ರೇಲ್ ಹಾಗೂ ಹಮಾಸ್ ಉಗ್ರರ ಕದನ ಮುಂದುವರಿದಿದೆ. ಹಮಾಸ್ ಪರ ಸಿರಿಯಾ, ಇರಾನ್, ಲೆಬನಾನ್‌ನಂತಹ ದೇಶಗಳು ದಾಳಿಗೆ ಮುಂದಾಗಿದ್ದರೆ, ಅಮೆರಿಕ, ಬ್ರಿಟನ್, ಫ್ರಾನ್ಸ್ ಹಾಗೂ ಇತರೆ ದೇಶಗಳು ಇಸ್ರೇಲ್ ಬೆನ್ನಿಗೆ ನಿಂತಿವೆ.

ಭಾರತಕ್ಕೆ ಮರಳಲು ಬಯಸಿರುವ ನಮ್ಮ ನಾಗರಿಕರಿಗೆ ಸೌಲಭ್ಯ ಕಲ್ಪಿಸಲು ಆಪರೇಷನ್ ಅಜಯ್ ಆರಂಭಿಸಲಾಗಿದೆ. ವಿಶೇಷ ಚಾರ್ಟರ್ ಫ್ಲೈಟ್‌ಗಳು ಮತ್ತು ಇತರೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ” ಎಂದು ಜೈಶಂಕರ್ ಅವರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ವಿದೇಶದಲ್ಲಿ ನಮ್ಮ ಜನರ ಸುರಕ್ಷತೆ ಹಾಗೂ ಯೋಗ- ಕ್ಷೇಮಕ್ಕಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ದಿಲ್ಲಿಯಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ, ಟೆಲ್ ಅವಿವ್‌ ಮತ್ತು ರಾಮಲ್ಲಾಹ್‌ನಲ್ಲಿ ಪ್ರತ್ಯೇಕ ತುರ್ತು ಸಹಾಯವಾಣಿಗಳನ್ನು ತೆರೆದಿದೆ. ಸಹಾಯದ ಅಗತ್ಯ ಇರುವ ಭಾರತೀಯರಿಗೆ ಅಗತ್ಯ ಮಾಹಿತಿ ಮತ್ತು ನೆರವು ಒದಗಿಸುವುದು ಹಾಗೂ ಪರಿಸ್ಥಿತಿಯ ಅವಲೋಕನ ಮಾಡುವುದು ಇದರ ಉದ್ದೇಶವಾಗಿದೆ. ಇಸ್ರೇಲ್‌ನಲ್ಲಿ ಸುಮಾರು 20 ಸಾವಿರ ಭಾರತೀಯರು ಇದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿ ಕೇರಳದ ಸುಮಾರು 7 ಸಾವಿರ ಮಂದಿ ಸಿಲುಕಿದ್ದು, ಅವರಿಗೆ ಸಹಾಯ ಮಾಡುವಂತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಮಧ್ಯಪ್ರವೇಶ ಮಾಡುವಂತೆ ಸಿಎಂ ಪಿಣರಾಯಿ ವಿಜಯನ್ ಅವರು ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು.
ತಮಿಳುನಾಡು ಸರ್ಕಾರ ಕೂಡ ಇಸ್ರೇಲ್‌ನಲ್ಲಿ ರಾಜ್ಯ ಸುಮಾರು 84 ಮಂದಿ ಇರುವುದಾಗಿ ತಿಳಿಸಿತ್ತು. ಶಿಕ್ಷಣ, ಉದ್ಯಮ ಅಥವಾ ಪ್ರವಾಸಕ್ಕೆಂದು ತೆರಳಿದವರು ಯುದ್ಧದ ನಡುವೆ ಸಿಲುಕಿಕೊಂಡಿದ್ದಾರೆ.

ಹಮಾಸ್ ಮತ್ತು ಇಸ್ರೇಲ್ ನಡುವಿನ ಸಮರ ಗುರುವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ಪಡೆಗಳು ಪರಸ್ಪರ ತೀವ್ರ ಸಂಘರ್ಷಕ್ಕೆ ಇಳಿದಿವೆ. ಲೆಬನಾನ್‌ನ ರಾಜಕೀಯ ಪಕ್ಷ ಹಾಗೂ ಉಗ್ರ ಸಂಘಟನೆ ಹೆಜ್ಬೊಲ್ಲಾ, ಇಸ್ರೇಲ್ ಕಡೆ ಕ್ಷಿಪಣಿಗಳನ್ನು ಉಡಾಯಿಸಿರುವುದಾಗಿ ಹೇಳಿದೆ. ಸಿರಿಯಾ ಕೂಡ ಇಸ್ರೇಲ್ ಭೂಭಾಗದ ಮೇಲೆ ಶೆಲ್ ದಾಳಿ ನಡೆಸಿದೆ.

lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

10 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

19 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

19 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

19 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

19 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

19 hours ago