BREAKING NEWS

ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ಆಪರೇಷನ್ ಅಜಯ್ ಶುರು

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಯುದ್ಧಪೀಡಿತ ದೇಶದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ವಿಶೇಷ ಚಾರ್ಟರ್ ವಿಮಾನಗಳು ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ದೇಶದಲ್ಲಿ ಇಸ್ರೇಲ್ ಹಾಗೂ ಹಮಾಸ್ ಉಗ್ರರ ಕದನ ಮುಂದುವರಿದಿದೆ. ಹಮಾಸ್ ಪರ ಸಿರಿಯಾ, ಇರಾನ್, ಲೆಬನಾನ್‌ನಂತಹ ದೇಶಗಳು ದಾಳಿಗೆ ಮುಂದಾಗಿದ್ದರೆ, ಅಮೆರಿಕ, ಬ್ರಿಟನ್, ಫ್ರಾನ್ಸ್ ಹಾಗೂ ಇತರೆ ದೇಶಗಳು ಇಸ್ರೇಲ್ ಬೆನ್ನಿಗೆ ನಿಂತಿವೆ.

ಭಾರತಕ್ಕೆ ಮರಳಲು ಬಯಸಿರುವ ನಮ್ಮ ನಾಗರಿಕರಿಗೆ ಸೌಲಭ್ಯ ಕಲ್ಪಿಸಲು ಆಪರೇಷನ್ ಅಜಯ್ ಆರಂಭಿಸಲಾಗಿದೆ. ವಿಶೇಷ ಚಾರ್ಟರ್ ಫ್ಲೈಟ್‌ಗಳು ಮತ್ತು ಇತರೆ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ” ಎಂದು ಜೈಶಂಕರ್ ಅವರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ವಿದೇಶದಲ್ಲಿ ನಮ್ಮ ಜನರ ಸುರಕ್ಷತೆ ಹಾಗೂ ಯೋಗ- ಕ್ಷೇಮಕ್ಕಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ದಿಲ್ಲಿಯಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ, ಟೆಲ್ ಅವಿವ್‌ ಮತ್ತು ರಾಮಲ್ಲಾಹ್‌ನಲ್ಲಿ ಪ್ರತ್ಯೇಕ ತುರ್ತು ಸಹಾಯವಾಣಿಗಳನ್ನು ತೆರೆದಿದೆ. ಸಹಾಯದ ಅಗತ್ಯ ಇರುವ ಭಾರತೀಯರಿಗೆ ಅಗತ್ಯ ಮಾಹಿತಿ ಮತ್ತು ನೆರವು ಒದಗಿಸುವುದು ಹಾಗೂ ಪರಿಸ್ಥಿತಿಯ ಅವಲೋಕನ ಮಾಡುವುದು ಇದರ ಉದ್ದೇಶವಾಗಿದೆ. ಇಸ್ರೇಲ್‌ನಲ್ಲಿ ಸುಮಾರು 20 ಸಾವಿರ ಭಾರತೀಯರು ಇದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿ ಕೇರಳದ ಸುಮಾರು 7 ಸಾವಿರ ಮಂದಿ ಸಿಲುಕಿದ್ದು, ಅವರಿಗೆ ಸಹಾಯ ಮಾಡುವಂತೆ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಮಧ್ಯಪ್ರವೇಶ ಮಾಡುವಂತೆ ಸಿಎಂ ಪಿಣರಾಯಿ ವಿಜಯನ್ ಅವರು ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದರು.
ತಮಿಳುನಾಡು ಸರ್ಕಾರ ಕೂಡ ಇಸ್ರೇಲ್‌ನಲ್ಲಿ ರಾಜ್ಯ ಸುಮಾರು 84 ಮಂದಿ ಇರುವುದಾಗಿ ತಿಳಿಸಿತ್ತು. ಶಿಕ್ಷಣ, ಉದ್ಯಮ ಅಥವಾ ಪ್ರವಾಸಕ್ಕೆಂದು ತೆರಳಿದವರು ಯುದ್ಧದ ನಡುವೆ ಸಿಲುಕಿಕೊಂಡಿದ್ದಾರೆ.

ಹಮಾಸ್ ಮತ್ತು ಇಸ್ರೇಲ್ ನಡುವಿನ ಸಮರ ಗುರುವಾರ ಆರನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ಪಡೆಗಳು ಪರಸ್ಪರ ತೀವ್ರ ಸಂಘರ್ಷಕ್ಕೆ ಇಳಿದಿವೆ. ಲೆಬನಾನ್‌ನ ರಾಜಕೀಯ ಪಕ್ಷ ಹಾಗೂ ಉಗ್ರ ಸಂಘಟನೆ ಹೆಜ್ಬೊಲ್ಲಾ, ಇಸ್ರೇಲ್ ಕಡೆ ಕ್ಷಿಪಣಿಗಳನ್ನು ಉಡಾಯಿಸಿರುವುದಾಗಿ ಹೇಳಿದೆ. ಸಿರಿಯಾ ಕೂಡ ಇಸ್ರೇಲ್ ಭೂಭಾಗದ ಮೇಲೆ ಶೆಲ್ ದಾಳಿ ನಡೆಸಿದೆ.

lokesh

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago