ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ, ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.
ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು. 2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…