ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ, ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.
ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು. 2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…