BREAKING NEWS

ಆಪರೇಷನ್ ಹಸ್ತ: ಕಾಂಗ್ರೆಸ್ ಸೇರ್ಪಡೆಗೊಂಡ ಎಸ್​​ಟಿ ಸೋಮಶೇಖರ್ ಬೆಂಬಲಿಗರು

ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ,  ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

ಸೋಮಶೇಖರ್ ಹೆಸರು ಹೇಳದಂತೆ ತಡೆದ ಶಾಸಕ ಶ್ರೀನಿವಾಸ್

ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು‌ ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು.  2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago