BREAKING NEWS

ಆಪರೇಷನ್ ಹಸ್ತ: ಕಾಂಗ್ರೆಸ್ ಸೇರ್ಪಡೆಗೊಂಡ ಎಸ್​​ಟಿ ಸೋಮಶೇಖರ್ ಬೆಂಬಲಿಗರು

ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ,  ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡಿದರು.

ಸೋಮಶೇಖರ್ ಹೆಸರು ಹೇಳದಂತೆ ತಡೆದ ಶಾಸಕ ಶ್ರೀನಿವಾಸ್

ಕೆಪಿಸಿಸಿ ಸಭೆಯಲ್ಲಿ ಮಾತನಾಡುತ್ತಿದ್ದ ಆನೆಕಲ್ ಶಾಸಕ ಶಿವಣ್ಣ ಅವರು, ಸೋಮಶೇಖರ್ ಹೆಸರು ಹೇಳಿದ್ದಾರೆ. ಈ ವೇಳೆ ಸೋಮಶೇಖರ್ ಹೆಸರು ಹೇಳದಂತೆ ನೆಲಮಂಗಲ ಶಾಸಕ ಶ್ರೀನಿವಾಸ್ ಅವರು ತಡೆದಿದ್ದಾರೆ. ಕೂಡಲೇ ಮಾತು‌ ಬದಲಾಯಿಸಿದ ಅವರು, ಸೋಮಶೇಖರ್ ರಾಜಕೀಯ ಬೆಳವಣಿಗೆ ಬಗ್ಗೆ ಹೇಳಿದರು. ನಾನು ಮತ್ತು ಸೋಮಶೇಖರ್ ಒಂದೇ ಬಾರಿಗೆ ಚುನಾವಣೆಗೆ ಸ್ಫರ್ಧೆ ಮಾಡಿದ್ದೆವು.  2004 ರಲ್ಲಿ ನಮಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಎರಡು ಬಾರಿ ಸೋತರೂ ಮತ್ತೆ ಟಿಕೆಟ್ ನೀಡಿತ್ತು. ಇದರರ್ಥ ಕಾಂಗ್ರೆಸ್ ನಮ್ಮ ಕೈಬಿಡಲ್ಲ. ಕೆಲವೊಂದು ‌ಕಾರಣಗಳಿಂದ ಸೋಮಶೇಖರ್ ಬಿಜೆಪಿ ಹೋಗಿದ್ದಾರೆ ಎಂದರು.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

39 mins ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

41 mins ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

44 mins ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

46 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

49 mins ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

58 mins ago